ಐವರ್ನಾಡು : ರಾಜ್ಯ ಸರಕಾರದ ಗೃಹಲಕ್ಷ್ಮಿ ಯೋಜನೆಯ ಅನುಷ್ಠಾನ ಕಾರ್ಯಕ್ರಮ

0

ನೂರಾರು ಫಲಾನುಭವಿಗಳು ಭಾಗಿ, ಕಾರ್ಯಕ್ರಮ ವೀಕ್ಷಣೆ

ಕರ್ನಾಟಕ ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮಿ ಯೋಜನೆಯ ಅನುಷ್ಠಾನ ಕಾರ್ಯಕ್ರಮ ಇಂದು ರಾಜ್ಯದಾದ್ಯಂತ ಅನುಷ್ಠಾನಗೊಳ್ಳಲಿರುವ ಹಿನ್ನೆಲೆಯಲ್ಲಿ ಐವರ್ನಾಡು ಗ್ರಾ.ಪಂ.

ಗ್ರಾಮ ವಿಕಾಸ ಸಭಾಂಗಣ ಹಾಗೂ ಸಭಾಂಗಣದ ಹೊರಗೆ ಎರಡು ಕಡೆಯಲ್ಲಿ ಕಾರ್ಯಕ್ರಮವನ್ನು ಪ್ರೊಜೆಕ್ಟರ್ ಮುಖಾಂತರ ನೋಡುವ ವ್ಯವಸ್ಥೆ ಮಾಡಲಾಗಿತ್ತು.

ನೂರಾರು ಜನ ಫಲಾನುಭವಿಗಳು ಕಾರ್ಯಕ್ರಮವನ್ನು ವೀಕ್ಷಿಸಿದರು.
ಈ ಸಂದರ್ಭದಲ್ಲಿ ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ ಲೀಲಾವತಿ ಕುತ್ಯಾಡಿ,

ಉಪಾಧ್ಯಕ್ಷ ಬಾಲಕೃಷ್ಣ ಕೀಲಾಡಿ, ಪಿಡಿಒ ಶ್ಯಾಮ್ ಪ್ರಸಾದ್, ಗ್ರಾ.ಪಂ ಸದಸ್ಯರು,ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ನೂರಾರು ಮಂದಿ ಫಲಾನುಭವಿಗಳು ಉಪಸ್ಥಿತರಿದ್ದರು. ಸಭಾಂಗಣ ಭರ್ತಿಗೊಂಡು ಹೊರಭಾಗದಲ್ಲೂ ಹಲವಾರು ಮಂದಿ ಮಹಿಳೆಯರು ಕಾರ್ಯಕ್ರಮವನ್ನು ವೀಕ್ಷಿಸಿದರು.