ಕಳಂಜ ಗ್ರಾ.ಪಂ ನಲ್ಲಿ ರಾಜ್ಯ ಸರಕಾರದ ಗೃಹಲಕ್ಷ್ಮಿ ಯೋಜನೆಯ ಅನುಷ್ಠಾನ ಕಾರ್ಯಕ್ರಮ

0

ಕರ್ನಾಟಕ ಸರಕಾರದ ಮಹಾತ್ವಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮಿ ಅನುಷ್ಠಾನ ಕಾರ್ಯಕ್ರಮ ಇಂದು ರಾಜ್ಯದಾದ್ಯಂತ ಅನುಷ್ಠಾನಗೊಳ್ಳಲಿರುವ ಹಿನ್ನೆಲೆಯಲ್ಲಿ ಕಳಂಜ ಗ್ರಾ.ಪಂ. ನ ಗೌರಿ ಸಭಾಂಗಣದಲ್ಲಿ ಕಾರ್ಯಕ್ರಮವನ್ನು ಪ್ರೋಜೆಕ್ಟರ್ ಮುಖಾಂತರ ನೋಡುವ ವ್ಯವಸ್ಥೆ ಮಾಡಲಾಗಿತ್ತು.

ಗ್ರಾ.ಪಂ ಅಧ್ಯಕ್ಷ ಬಾಲಕೃಷ್ಣ ಬೇರಿಕೆ ದೀಪ ಬೇಳಗಿಸಿ ಕಾರ್ಯಕ್ರಮ ಕ್ಕೆ ಚಾಲನೆ ನೀಡಿದರು.

ಮಾಜಿ ಗ್ರಾ.ಪಂ ಅಧ್ಯಕ್ಷ ವಿಶ್ವನಾಥ ರೈ ಪ್ರಾಸ್ತಾವಿಕ ಮಾತುಗಳನ್ನಾಡಿದರು ಉಪಾಧ್ಯಕ್ಷೆ ಪ್ರೇಮಲತಾ ಮತ್ತು ಗ್ರಾ.ಪಂ ಸದಸ್ಯರಾದ ಗಣೇಶ್ ರೈ ಶುಭ ಹಾರೈಸಿದರು. ಪಿಡಿಒ ಗೀತಾರವರು ಸ್ವಾಗತಿಸಿ ಸಿಬ್ಬಂದಿ ಗಿರಿಧರ ವಂದಿಸಿದರು.

ನೋಡಲ್ ಅಧಿಕಾರಿ ವಿಜಯ ಕಾರ್ಯಕ್ರಮ ನಿರೂಪಿಸಿದರು.ಕಾರ್ಯಕ್ರಮದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಸಂಜೀವಿನಿ ಒಕ್ಕೂಟದ MBK,LCRP ಹಾಗೂ ನೂರಾರು ಮಂದಿ ಫಲಾನುಭವಿಗಳು ಗ್ರಾಮಸ್ಥರು ಉಪಸ್ಥಿತರಿದ್ದರು.