ಗೃಹಲಕ್ಷ್ಮಿ ಯೋಜನೆ ಜಾರಿ : ಉಬರಡ್ಕ ಗ್ರಾ.ಪಂ. ನಲ್ಲಿ ಸೇರಿದ ಗ್ರಾಮಸ್ಥರು

0

ಎಲ್.ಇ.ಡಿ. ಪರದೆ ಮೂಲಕ ಕಾರ್ಯಕ್ರಮ ವೀಕ್ಷಣೆಗೆ ವ್ಯವಸ್ಥೆ

ರಾಜ್ಯ ಸರಕಾರದ ಮಹತ್ವಾಕಾಂಕ್ಷೆಯ ಯೋಜನೆಯಾದ ಗೃಹಲಕ್ಷ್ಮಿ ಯೋಜನೆಗೆ ಇಂದು ಮೈಸೂರಿನಲ್ಲಿ ಅಧಿಕೃತ ಚಾಲನೆ ದೊರೆತಿದ್ದು ಉಬರಡ್ಕ ಮಿತ್ತೂರು ಗ್ರಾ.ಪಂ. ನಲ್ಲಿಯೂ ಕಾರ್ಯಕ್ರಮ ಅನುಷ್ಠಾನ ಮಾಡಲಾಯಿತು.

ಸಮಾರಂಭದಲ್ಲಿ ನೂರಾರು ಗ್ರಾಮಸ್ಥರು ಸೇರಿದ್ದರು.

ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ ಪೂರ್ಣಿಮಾ ಸೂಂತೋಡು, ಉಪಾಧ್ಯಕ್ಷೆ ಶ್ರೀಮತಿ ಚಿತ್ರಕುಮಾರಿ, ಸದಸ್ಯರುಗಳಾದ ಪ್ರಶಾಂತ್ ಪಾನತ್ತಿಲ, ಶ್ರೀಮತಿ ಭವಾನಿ ಮೂರ್ಜೆ, ಅನಿಲ್ ಬಳ್ಳಡ್ಕ,

ಉಬರಡ್ಕ ಗ್ರಾ.ಪಂ ಮಾಜಿ ಅಧ್ಯಕ್ಷ ಪಿ.ಎಸ್ ಗಂಗಾಧರ, ಉಬರಡ್ಕ ಮಿತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕ ಸುರೇಶ್ ಎಂ.ಎಚ್ ಮೊದಲಾದವರು ಉಪಸ್ಥಿತರಿದ್ದರು.

ನೋಡೆಲ್ ಅಧಿಕಾರಿ‌ಯಾಗಿ ಸಹಾಯಕ ತೋಟಗಾರಿಕಾ ಅಧಿಕಾರಿ ವಿಜೇತ್ ಎಸ್. ಯೋಜನೆಯ ಉದ್ದೇಶದ ವಿವರ ಹಂಚಿಕೊಂಡರು. ಪಿ.ಡಿ.ಒ ವಿದ್ಯಾಧರ್ ಹಾಗೂ ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಸಹಕರಿಸಿದರು.

ಪಂಚಾಯತ್ ಸಭಾಂಗಣದಲ್ಲಿ ದೊಡ್ಡ ಎಲ್ ಇ ಡಿ ಪರದೆ ಅಳವಡಿಸಿ ಮೈಸೂರಿನಲ್ಲಿ ನಡೆದ ಗೃಹಲಕ್ಷ್ಮಿ ಯೋಜನೆಯ ಕಾರ್ಯಕ್ರಮದ ಉದ್ಘಾಟನೆ ಯನ್ನು ವೀಕ್ಷಿಸುವ ವ್ಯವಸ್ಥೆ ಕಲ್ಪಿಸಲಾಗಿತ್ತು.