ಮಡಪ್ಪಾಡಿ ಗ್ರಾ. ಪಂ. : ರಾಜ್ಯ ಸರಕಾರದ ಗೃಹಲಕ್ಷ್ಮಿ ಯೋಜನೆಯ ಅನುಷ್ಠಾನ ಕಾರ್ಯಕ್ರಮ

0

ಕರ್ನಾಟಕ ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡುವ ಕಾರ್ಯಕ್ರಮ ಇಂದು ರಾಜ್ಯಾದ್ಯಂತ ಅನುಷ್ಟಾನಗೊಂಡಿತು‌ ಈ ಹಿನ್ನಲೆಯಲ್ಲಿ ಸರಕಾರದ ಸುತ್ತೋಲೆಯಂತೆ ಮಡಪ್ಪಾಡಿ ಗ್ರಾಮ ಪಂಚಾಯತ್ ಸಭಾಂಣದಲ್ಲಿ ಕಾರ್ಯಕ್ರಮವನ್ನು ಎಲ್ಇಡಿ ಟಿವಿ ಮುಖಾಂತರ ಕಾರ್ಯಕ್ರಮವನ್ನು ನೇರವಾಗಿ ವೀಕ್ಷಿಸುವ ವ್ಯವಸ್ಥೆ ಮಾಡಲಾಯಿತು.

ಗ್ರಾಮ ಪಂಚಾಯತ್ ಆವರಣದಲ್ಲಿ ರಂಗೋಲಿ ರಚಿಸಿ ಫಲಾನುಭವಿಗಳನ್ನು ಸ್ವಾಗತಿಸಲಾಯಿತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾ ಜಯರಾಮ ಪಿ.ಸಿ., ಉಪಾಧ್ಯಕ್ಷರು, ಸದಸ್ಯರು, ಪಂಚಾಯತ್ ಅಭಿವೃದ್ದಿ ಅಧಿಕಾರಿಯವರು, ನೋಡೆಲ್ ಅಧಿಕಾರಿಯಾದ ದೇವರಾಜ್ ಮುತ್ಲಾಜೆಯವರು, ಮಡಪ್ಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಪಿ.ಸಿ.ಜಯರಾಮ, ನಿರ್ದೇಶಕರು, ಕಾರ್ಯನಿರ್ವಹಣಾಧಿಕಾರಿ, ಸಂಜೀವಿನಿ ಸಂಘದ ಅಧ್ಯಕ್ಷರು ಸದಸ್ಯರು ಸದಸ್ಯರು ಹಾಗೂ ಸಿಬ್ಬಂದಿಗಳು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಹಾಗೂ ಗ್ರಾಮ ಪಂಚಾಯತ್ ಸಿಬ್ಬಂದಿಗಳು ಹಾಜರಿದ್ದರು.