ಬಳ್ಪ ಗ್ರಾ.ಪಂ. ನಲ್ಲಿ ಗೃಹಲಕ್ಷ್ಮಿ ಯೋಜನೆಗೆ ಚಾಲನೆ

0

ಕಿಕ್ಕಿರಿದು ಕಾರ್ಯಕ್ರಮದ ನೇರಪ್ರಸಾರ ವೀಕ್ಷಿಸಿದ ಫಲಾನುಭವಿ ಸ್ತ್ರೀಯರು

ಕರ್ನಾಟಕ ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡುವ ಕಾರ್ಯಕ್ರಮ ಆ. 30ರಂದು ರಾಜ್ಯಾದ್ಯಂತ ಅನುಷ್ಟಾನಗೊಂಡಿದ್ದು, ಬಳ್ಪ ಗ್ರಾಮ ಪಂಚಾಯತ್ ನಲ್ಲಿ ನೂರಾರು ಫಲಾನುಭವಿಗಳು ಸೇರಿ ಕಾರ್ಯಕ್ರಮ ವೀಕ್ಷಿಸಿದರು.

ಕಡಬ ತಾ.ಪಂ. ಸಹಾಯಕ ನಿರ್ದೇಶಕರಾದ ಚೆನ್ನಪ್ಪ ಗೌಡ ಕಜೆಮೂಲೆ ನೋಡೆಲ್ ಅಧಿಕಾರಿಯಾಗಿ ಆಗಮಿಸಿ ಮಾಹಿತಿ ನೀಡಿದರು. ಪಂಚಾಯತ್ ಅಧ್ಯಕ್ಷ ಹರ್ಷಿತ್ ಕಾರ್ಜ, ಉಪಾಧ್ಯಕ್ಷೆ ಪಿ.ಡಿ. ಪಾರ್ವತಿ, ಪಂಚಾಯತ್ ಪ್ರಭಾರ ಪಿಡಿಒ ರಘು ಎನ್, ಸದಸ್ಯರಾದ ಶ್ರೀಮತಿ ಶಶಿಕಲಾ ಸೂಂತಾರು, ಚಂದ್ರಶೇಖರ ಅಕ್ಕೇಣಿ, ಶ್ರೀಮತಿ ಸುನಿತಾ ಸಂಪ್ಯಾಡಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಗ್ರಾಮ ಪಂಚಾಯತ್ ಸಿಬ್ಬಂದಿಗಳು ಸಹಕರಿಸಿದರು.