ಸೌಜನ್ಯ ಪ್ರಕರಣದ ನ್ಯಾಯಕ್ಕಾಗಿ ಆಗ್ರಹಿಸಿ ಸುಬ್ರಹ್ಮಣ್ಯದ ಕುಮಾರಧಾರದಿಂದ ಮೌನ ಮೆರವಣಿಗೆ ಆರಂಭ

0

ಸಾವಿರಾರು ಮಂದಿ ಭಾಗಿ, ಸೌಜನ್ಯಳ ತಾಯಿ ಕುಸುಮಾವತಿ, ಹೋರಾಟಗಾರ ಮಹೇಶ್ ತಿಮ್ಮರೋಡಿ ಉಪಸ್ಥಿತಿ

ಸೌಜನ್ಯ ಹತ್ಯೆ ಪ್ರಕರಣದ ನ್ಯಾಯಕ್ಕಾಗಿ ಹಾಗೂ ಮರು ತನಿಖೆಗೆ ಒತ್ತಾಯಿಸಿ ಇಂದು ಸುಬ್ರಹ್ಮಣ್ಯದಲ್ಲಿ ಪ್ರತಿಭಟನೆ ನಡೆಯುತಿದ್ದು ಕುಮಾರಧಾರ ಬಳಿಯಿಂದ ಮೌನ ಮೆರವಣಿಗೆ ಆರಂಭಗೊಂಡಿದ್ದು ತಿಮ್ಮರೋಡಿ ಅವರು ತೆಂಗಿನ ಕಾಯಿ ಒಡೆದು ಚಾಲನೆ ನೀಡಲಾಯಿತು.


ಸೌಜನ್ಯಳ ನ್ಯಾಯಕ್ಕಾಗಿ ಹೂರಾಟ ಸಮಿತಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಿಂದ ನಡೆಯಲಿರುವ ಈ ಪ್ರತಿಭಟನೆಯಲ್ಲಿ ಸೌಜನ್ಯಳ ತಾಯಿ ಕುಸುಮಾವತಿ, ಹೋರಾಟಗಾರ ಮಹೇಶ್ ತಿಮ್ಮರೋಡಿ ಉಪಸ್ಥಿತರಿದ್ದಾರೆ.

ರೋಟರಿ ಕ್ಲಬ್ ಸುಬ್ರಹ್ಮಣ್ಯ, ಲಯನ್ಸ್ ಕ್ಲಬ್ ಸುಬ್ರಹ್ಮಣ್ಯ, ಜೆಸಿಐ ಸುಬ್ರಹ್ಮಣ್ಯ, ಬಿಎಂಎಸ್ ಆಟೋ ಚಾಲಕ ಮಾಲಕ ಸಂಘ ಸುಬ್ರಹ್ಮಣ್ಯ, ಕುಕ್ಕೇ ಶ್ರೀ ಆಟೋ ಚಾಲಕ ಮಾಲಕ ಸಂಘ, ಕುಕ್ಕೇ ಶ್ರೀ ಟ್ಯಾಕ್ಸಿ ಚಾಲಕ ಮಾಲಕ ಸಂಘ, ಸಂಜೀವಿನಿ ಒಕ್ಕೂಟ,ರವಿಕಕ್ಕೆಪದವು ಸಮಾಜ ಸೇವ ಟ್ರಸ್ಟ್, ಸುಬ್ರಹ್ಮಣ್ಯ ವರ್ತಕರ ಸಂಘ, ಗೌಡ ಸಮಿತಿ ಸುಬ್ರಹ್ಮಣ್ಯ ವಲಯ ಹಾಗೂ ವಿವಿಧ ಸಂಘ ಸಂಸ್ಥೆಗಳು ಮತ್ತು ಸ್ಥಳೀಯರು ಭಾಗವಹಿಸಲಿದ್ದಾರೆ.