ನೆಲ್ಲೂರು ಕೆಮ್ರಾಜೆ : ಸ್ಪೂರ್ತಿ ಸಂಜೀವಿನಿ ಒಕ್ಕೂಟದ ಪದಗ್ರಹಣ

0

ನೆಲ್ಲೂರು ಕೆಮ್ರಾಜೆ ಗ್ರಾಮದ ಸ್ಪೂರ್ತಿ ಸಂಜೀವಿನಿ ಒಕ್ಕೂಟದ ಪದಗ್ರಹಣ ಸಮಾರಂಭ ವು ಆ.29ರಂದು ನೆಲ್ಲೂರು ಕೆಮ್ರಾಜೆ ಗ್ರಾ.ಪಂ.ಸಭಾಂಗಣದಲ್ಲಿ ನಡೆಯಿತು.
ಅಧ್ಯಕ್ಷತೆಯನ್ನು ಒಕ್ಕೂಟದ ಅಧ್ಯಕ್ಷೆ ಇಂದಿರಾ ಗುಡ್ಡನಮನೆ ವಹಿಸಿದ್ದರು.
ಪಂಚಾಯತ್ ಅಧ್ಯಕ್ಷರಾದ ಧನಂಜಯ ಕುಮಾರ್ ಕೋಟೆಮಲೆ ಕಾರ್ಯಕ್ರಮ ಉದ್ಘಾಟಿಸಿದರು.


ವೇದಿಕೆಯಲ್ಲಿ ಕಾರ್ಯದರ್ಶಿ ಚಂದ್ರಾವತಿ ಗುಡ್ಡನಮನೆ, ನೆಲ್ಲೂರು ಕೆಮ್ರಾಜೆ ಗ್ರಾ.ಪಂ.ಉಪಾಧ್ಯಕ್ಷೆ ವಂದನಾ ಹೊಸ್ತೋಟ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಲೀಲಾವತಿ, ಒಕ್ಕೂಟದ ನೂತನ ಅಧ್ಯಕ್ಷೆ ಶ್ರೀಮತಿ ಮಮತಾ ಜಬಳೆ ಹಾಗೂ ಜಲಜಾಕ್ಷಿ, ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕಿ ಶ್ರೀಮತಿ ಶ್ವೇತಾ, ಸಂಯೋಜಕರಾದ ನಮಿತಾ, ಅಮೂಲ್ಯ ಸಾಕ್ಷರತಾ ಕೇಂದ್ರ ಆಪ್ತಸಮಾಲೋಚಕಿ ಶ್ರೀಮತಿ ಸುಜಾತ ಉಪಸ್ಥಿತರಿದ್ದರು.

ಸಭೆಯಲ್ಲಿ ಪಂಚಾಯತ್ ಸದಸ್ಯರುಗಳು ಹಾಗೂ ಒಕ್ಕೂಟದ ಸದಸ್ಯರು, ಎಲ್ ಸಿ‌ಆರ್ ಪಿಗಳು, ಎಂಬಿಕೆಯವರು, ಪದಾಧಿಕಾರಿಗಳು, ಉಪಸ್ಥಿತರಿದ್ದರು. ಎಫ್ ಎಲ್ ಸಿ ಆರ್ ಪಿ ಎಲ್ ಸಿ ಆರ್ ಪಿ ಶ್ರೀಮತಿ ಭವ್ಯ ಕಜೆ ಪ್ರಾರ್ಥಿಸಿ, ಕೊನೆಗೆ ವಂದಿಸಿದರು. ಕೃಷಿ ಸಖಿ ಗೀತಾ ವಲಿಕಜೆ ಸ್ವಾಗತಿಸಿದರು. ಶ್ರೀಮತಿ ಗೀತಾ ಕಜೆ ಕಾರ್ಯಕ್ರಮ ನಿರೂಪಿಸಿದರು