ಕೊಲ್ಲಮೊಗ್ರು ಶಾಲೆಯಲ್ಲಿ ಸುದ್ದಿ ಸಮೂಹ ಸಂಸ್ಥೆ ಮತ್ತು ಷರಾ ಪ್ರಕಾಶನದ ವತಿಯಿಂದ ನಡೆದ ಪ್ರಬಂಧ ಸ್ಪರ್ಧೆಯ ಬಹುಮಾನ ವಿತರಣೆ

0

ಸುದ್ದಿ ಸಮೂಹ ಸಂಸ್ಥೆ, ಷರಾ ಪ್ರಕಾಶನ ಸುಳ್ಯ ಸಹಯೋಗದಲ್ಲಿ ಸ್ವಾತಂತ್ರ್ಯೋತ್ಸವ ಸಂಭ್ರಮದ ಅಂಗವಾಗಿ ಶಾಲಾ ವಿದ್ಯಾರ್ಥಿಗಳಿಗೆ ನಡೆಸಿದ ಪ್ರಬಂಧ ಸ್ಪರ್ಧೆಯ ಬಹುಮಾನ ವಿತರಣಾ ಕಾರ್ಯಕ್ರಮವು ಕೊಲ್ಲಮೊಗ್ರದ ಸ. ಹಿ.ಪ್ರಾ.ಶಾಲೆ ಬಂಗ್ಲೆಗುಡ್ಡೆಯಲ್ಲಿ ಆ.29 ರಂದು ನಡೆಯಿತು.


ಸಹಶಿಕ್ಷಕರಾದ ಸುಭಾಷ್ ಎನ್ ಬಹುಮಾನ ವಿತರಿಸಿದರು. ಶಿಕ್ಷಕಿಯರಾದ ಶ್ರೀಮತಿ ರೇಷ್ಮಾ.ಪಿ, ರೋಹಿತಾಕ್ಷಿ ಉಪಸ್ಥಿತರಿದ್ದರು.
ಸುದ್ದಿ ಪತ್ರಿಕೆಯ ಕಛೇರಿ ವ್ಯವಸ್ಥಾಪಕ ಯಶ್ವಿತ್ ಕಾಳಂಮನೆ, ವರದಿಗಾರ ದಯಾನಂದ ಕೊರತ್ತೋಡಿ ಉಪಸ್ಥಿತರಿದ್ದರು. ಸುದ್ದಿ ಬಿಡುಗಡೆ ವರದಿಗಾರ ಶಿವರಾಮ ಕಜೆಮೂಲೆ ಪ್ರಸ್ತಾವಿಕವಾಗಿ ಮಾತನಾಡಿದರು.