ಅಲೆಕ್ಕಾಡಿ ಸ.ಹಿ.ಪ್ರಾ. ಶಾಲೆಯಲ್ಲಿ ಸುದ್ದಿ ಸಮೂಹ ಸಂಸ್ಥೆ ಮತ್ತು ಷರಾ ಪ್ರಕಾಶನದ ವತಿಯಿಂದ ನಡೆದ ಪ್ರಬಂಧ ಸ್ಪರ್ಧೆಯ ಬಹುಮಾನ ವಿತರಣೆ

0

ಸುದ್ದಿ ಸಮೂಹ ಸಂಸ್ಥೆ, ಷರಾ ಪ್ರಕಾಶನ ಸುಳ್ಯ ಸಹಯೋಗದಲ್ಲಿ ಸ್ವಾತಂತ್ರ್ಯೋತ್ಸವ ಸಂಭ್ರಮದ ಅಂಗವಾಗಿ ಶಾಲಾ ವಿದ್ಯಾರ್ಥಿಗಳಿಗೆ ನಡೆಸಿದ ಪ್ರಬಂಧ ಸ್ಪರ್ಧೆಯ ಬಹುಮಾನ ವಿತರಣಾ ಕಾರ್ಯಕ್ರಮವು ಅಲೆಕ್ಕಾಡಿ ಸ.ಹಿ.ಪ್ರಾ.ಶಾಲೆಯಲ್ಲಿ ಆ. 31ರಂದು ನಡೆಯಿತು.
ಮುಖ್ಯೋಪಾಧ್ಯಾಯರಾದ ಶ್ರೀಮತಿ ಶಶಿಕಲಾ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷ ಅವಿನಾಶ್ ಡಿ. ಬಹುಮಾನ ವಿತರಿಸಿದರು. ಜಿಪಿಟಿ ಶಿಕ್ಷಕಿ ಶ್ರೀಮತಿ ನಳಿನಾಕ್ಷಿ ಬಿ, ಅತಿಥಿ ಶಿಕ್ಷಕಿಯರಾದ ಕು.‌ರಶ್ಮೀ ಎನ್, ಭವಾನಿ, ಸುಚಿತಾ, ಕು. ಚೈತ್ರಾ, ಜ್ಞಾನದೀಪ ಶಿಕ್ಷಕಿ ಕು. ಸುಮಿತ್ರಾ, ಗೌರವ ಶಿಕ್ಷಕಿಯರಾದ ಪ್ರಭಾವತಿ, ವಾಣಿಶ್ರೀ, ಎಸ್.ಡಿ.ಎಂ.ಸಿ. ಸದಸ್ಯೆ ಶ್ರೀಮತಿ ಸವಿತಾ, ಪೋಷಕರಾದ ನಂದಕುಮಾರ್, ಅಡುಗೆ ಸಿಬ್ಬಂದಿಗಳಾದ ಲೀಲಾವತಿ, ವನಿತಾ ಮತ್ತು ಸಾವಿತ್ರಿ, ಸುಳ್ಯ ಸುದ್ದಿ ಪತ್ರಿಕೆಯ ವರದಿಗಾರ ಈಶ್ವರ ವಾರಣಾಶಿ, ಸುದ್ದಿ ಪ್ರತಿನಿಧಿ ಸಂಕಪ್ಪ ಸಾಲ್ಯಾನ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.