ಜಾಲ್ಸೂರು: ಶ್ರೀ ಗುರುರಾಘವೇಂದ್ರ ಭಜನಾ ಮಂದಿರದಲ್ಲಿ ಶ್ರೀ ಗುರುರಾಯರ ಆರಾಧನಾ ಮಹೋತ್ಸವ

0

ಜಾಲ್ಸೂರಿನ ಶ್ರೀ ಗುರುರಾಘವೇಂದ್ರ ಭಜನಾ ಮಂದಿರದಲ್ಲಿ ಶ್ರೀ ಗುರುರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವವು ಸೆ.1ರಂದು ಜರುಗಿತು.


ಮಂದಿರದ ಅರ್ಚಕ ಪುರೋಹಿತ ರಾಮಕೃಷ್ಣ ಭಟ್ ಅವರ ನೇತೃತ್ವದಲ್ಲಿ ವಿವಿಧ ಪೂಜಾ ಕೈಂಕರ್ಯಗಳು ನಡೆದವು.
ಈ ಸಂದರ್ಭದಲ್ಲಿ ಭಜನಾ ಮಂದಿರದ ಅಧ್ಯಕ್ಷ ಎಸ್. ಬಾಬು ಪಾಟಾಳಿ ಅರಿಯಡ್ಕ ಸೇರಿದಂತೆ ಮಂದಿರದ ಪದಾಧಿಕಾರಿಗಳು ಉಪಸ್ಥಿತರಿದ್ದರು.