ಬೆಂಗಳೂರು ವಿಧಾನಸೌಧದಲ್ಲಿ ವಿರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ ಅವರ ನೂತನ ಕಛೇರಿ ಕಾರ್ಯಾರಂಭ

0

ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕಾನೂನು ಸಲಹೆಗಾರರು ಮತ್ತು ಕೊಡಗಿನ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರ ಬೆಂಗಳೂರಿನ ವಿಧಾನಸೌಧದಲ್ಲಿರುವ ನೂತನ ಕಚೇರಿಯು ಸೆ.1ರಂದು ಕಾರ್ಯಾರಂಭಗೊಂಡಿತು.

ಈ ಸಂದರ್ಭದಲ್ಲಿ ಸಂಪಾಜೆ ವಲಯ ಕಾಂಗ್ರೆಸ್ ಅಧ್ಯಕ್ಷ ಸೋಮಶೇಖರ್ ಕೊಯಿಂಗಾಜೆ, ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಕುಂಞ ಗೂನಡ್ಕ, ಕರ್ನಾಟಕ ರಾಜ್ಯ ಯುವ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಆಶಿತ್ ಜಿ.ಪಿರೇರಾ, ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷ ಎ.ಕೆ.ಇಬ್ರಾಹಿಂ, ಕಾರ್ಮಿಕ ನಾಯಕರಾದ ಕೆ.ಪಿ.ಜಾನಿ ಕಲ್ಲುಗುಂಡಿ, ಕಾಂಗ್ರೆಸ್ ಕಾರ್ಯಕರ್ತರಾದ ವಸಂತ ಗೌಡ ಪೆಲ್ತಡ್ಕರವರು ಉಪಸ್ಥಿತರಿದ್ದರು.