ಸೆ.6: ಬೊಳುಬೈಲು ನವಚೇತನ ಯುವಕ ಮಂಡಲದ ವತಿಯಿಂದ 29ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಠಮಿ- ಸನ್ಮಾನ

0

ಜಾಲ್ಸೂರು ಗ್ರಾಮದ ಬೊಳುಬೈಲಿನ ನವಚೇತನ ಯುವಕ ಮಂಡಲದ ವತಿಯಿಂದ 29ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಠಮಿ ಉತ್ಸವವು ಬೊಳುಬೈಲಿನ ನವಚೇತನ ಮೈದಾನದಲ್ಲಿ ಸೆ.6ರಂದು ಜರುಗಲಿದೆ.
ಕಾರ್ಯಕ್ರಮವನ್ನು ಪ್ರಗತಿಪರ ಕೃಷಿಕ ವಾಸುದೇವ ಗೌಡ ಅರ್ಭಡ್ಕ ಅವರು ಉದ್ಘಾಟಿಸಲಿದ್ದು, ಯುವಕ ಮಂಡಲದ ಅಧ್ಯಕ್ಷ ಶಶಿಪ್ರಸಾದ್ ಕಾಟೂರು ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ತೀರ್ಥರಾಮ ಹೊಸೊಳಿಕೆ ಅವರು ಉಪಸ್ಥಿತರಿರಲಿದ್ದಾರೆ.

ಶ್ರೀಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ಪುರುಷರಿಗೆ, ಮಹಿಳೆಯರಿಗೆ ಹಾಗೂ ಮಕ್ಕಳಿಗೆ ವಿವಿಧ ಆಟೋಟ ಸ್ಪರ್ಧೆಗಳು ನಡೆಯಲಿದೆ.
ಸಂಜೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಯು.ಮಂ.ಅಧ್ಯಕ್ಷ ಶಶಿಪ್ರಸಾದ್ ಕಾಟೂರು ಅಧ್ಯಕ್ಷತೆ ವಹಿಸಲಿದ್ದಾರೆ. ಶಾಸಕಿ ಭಾಗೀರಥಿ ಮುರುಳ್ಯ, ಹರೀಶ್ ಆರಿಕೋಡಿ, ನಾಗೇಶ್ ಪಿ. ಮುಖ್ಯ ಅತಿಥಿಗಳಾಗಿ ಉಪಸ್ಥಿತರಿರಲಿದ್ದಾರೆ. ಈ ಸಂದರ್ಭದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವದ ಅಂಗವಾಗಿ ಯುವಕ ಮಂಡಲದ ವತಿಯಿಂದ ನಡೆದ ಅಮರ ಸುಳ್ಯ ಸ್ವಾತಂತ್ರ್ಯ ಸಂಗ್ರಾಮ 1837 ಸರಣಿ ಉಪನ್ಯಾಸ ಮಾಲಿಕೆಯ ಸಂಪನ್ಮೂಲ ವ್ಯಕ್ತಿಗಳಾದ ಕೆ.ಆರ್. ವಿದ್ಯಾಧರ ಕುಡೆಕಲ್ಲು, ತೇಜಕುಮಾರ್ ಬಡ್ಡಡ್ಕ , ಎ‌.ಕೆ.ಹಿಮಕರ, ಗೋಪಾಲ ಪೆರಾಜೆ ವಿನೋದ್ ಮೂಡಗದ್ದೆ ಅವರಿಗೆ ನವಚೇತನ ಗೌರವ ಸನ್ಮಾನ ಜರುಗಲಿದ್ದು, ವೆಂಕಟ್ರಮಣ ಗೌಡ ಕೆದಂಬಾಡಿ ಅವರು ಸನ್ಮಾನಿಸಲಿದ್ದಾರೆ.
ಸಮಾರೋಪ ಸಮಾರಂಭದ ಬಳಿಕ ಸಾಂಸ್ಕೃತಿಕ ಸಂಭ್ರಮ ಜರುಗಲಿದೆ.