ಸೆ. 24: ಸುಳ್ಯ ಮರಾಟಿ ಸಮಾಜ ಸೇವಾ ಸಂಘದಲ್ಲಿ ಗಣಹೋಮ, ಶ್ರೀ ಸತ್ಯನಾರಾಯಣ ಪೂಜಾ ಆಮಂತ್ರಣ ಪತ್ರ ಬಿಡುಗಡೆ

0

ಸುಳ್ಯ ತಾಲೂಕು ಮರಾಟಿ ಸಮಾಜ ಸೇವಾ ಸಂಘದ ಆಶ್ರಯದಲ್ಲಿ ಗಣಹೋಮ ಮತ್ತು ಶ್ರೀ ಸತ್ಯನಾರಾಯಣ ದೇವರ ಪೂಜಾ ಕಾರ್ಯಕ್ರಮ ಸೆ. 24ರಂದು ಗಿರಿದರ್ಶಿನಿ ಸಭಾ ಭವನದಲ್ಲಿ ನಡೆಯಲಿದ್ದು, ಆಮಂತ್ರಣ ಪತ್ರ ಬಿಡುಗಡೆ ಕಾರ್ಯಕ್ರಮ ಸೆ. 2ರಂದು ಸಂಘದ ಮಾಸಿಕ‌ ಸಭೆಯಲ್ಲಿ ನಡೆಯಿತು.
ಸಂಘದ ಅಧ್ಯಕ್ಷ ಜನಾರ್ಧನ ಬಿ. ಕುರುಂಜಿಭಾಗ್, ಪ್ರಧಾನ ಕಾರ್ಯದರ್ಶಿ ಬಾಲಕೃಷ್ಣ ನಾಯ್ಕ್ ಅಜ್ಜಾವರ, ಗೌರವಾಧ್ಯಕ್ಷ ಸೀತಾನಂದ ಬೇರ್ಪಡ್ಕ, ಜೊತೆ ಕಾರ್ಯದರ್ಶಿ ಧರ್ಮಣ್ಣ ನಾಯ್ಕ್ ಗರಡಿ, ಕೋಶಾಧಿಕಾರಿ ಜನಾರ್ಧನ ನಾಯ್ಕ್ ಕೇರ್ಪಳ, ಸಂಘಟನಾ ಕಾರ್ಯದರ್ಶಿ ಈಶ್ವರ ವಾರಣಾಶಿ, ಕ್ರೀಡಾ ಕಾರ್ಯದರ್ಶಿ ರಘುನಾಥ್ ಜಟ್ಟಿಪಳ್ಳ, ಸಾಂಸ್ಕೃತಿಕ ಕಾರ್ಯದರ್ಶಿ ಭವಾನಿಶಂಕರ ಕಲ್ಮಡ್ಕ, ಸದಸ್ಯರಾದ ನಿತ್ಯಾನಂದ ಕುಡೆಂಬಿ, ಶ್ರೀಮತಿ ಸುಲೋಚನ ನಾರಾಯಣ, ಶ್ರೀಮತಿ ರಾಜೇಶ್ವರಿ ಎಂ, ಯುವ ವೇದಿಕೆ ಅಧ್ಯಕ್ಷ ಮೋಹನ್ ಪೆರಾಜೆ, ಕಾರ್ಯದರ್ಶಿ ಉದಯಕುಮಾರ್ ಮಾಣಿಬೆಟ್ಟು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.