ಜಾಲ್ಸೂರು: 36ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಠಮಿ

0

ಜಾಲ್ಸೂರಿನ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ವತಿಯಿಂದ 36ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಠಮಿ ಕಾರ್ಯಕ್ರಮವು ಪಯಸ್ವಿನಿ ಪ್ರೌಢಶಾಲಾ ಕ್ರೀಡಾಂಗಣದಲ್ಲಿ ಸೆ.6ರಂದು ಜರುಗಿತು.

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷ ನಿಶಾಂತ್ ಮೋಂಟಡ್ಕ ಅವರು ತೆಂಗಿನಕಾಯಿ ಒಡೆಯುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಅಡ್ಕಾರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಜಯರಾಮ ರೈ ಜಾಲ್ಸೂರು ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಶುಭಹಾರೈಸಿದರು.
ಈ ಸಂದರ್ಭದಲ್ಲಿ

ಸಾ. ಶ್ರೀ. ಗಣೇಶೋತ್ಸವ ಸಮಿತಿಯ ಕಾರ್ಯದರ್ಶಿ ಧರ್ಮಪಾಲ ಕೆಮನಬಳ್ಳಿ, ಮಾದವ ಗೌಡ ಕಾಳಮನೆ, ದೈ.ಶಿಕ್ಷಣ ಶಿಕ್ಷಕ ಹರಿಪ್ರಕಾಶ್ ಅಡ್ಕಾರು, ವೀರನಾಥ್ ಐವರ್ನಾಡು , ಶ್ರೀ ಗುರುರಾಘವೇಂದ್ರ ಭಜನಾ ಮಂದಿರದ ಅಧ್ಯಕ್ಷ ಬಾಬು ಪಾಟಾಳಿ ಅರಿಯಡ್ಕ, ಜಾಲ್ಸೂರು ಗ್ರಾ.ಪಂ. ಮಾಜಿ ಅಧ್ಯಕ್ಷ ಕೆ.ಎಂ. ಬಾಬು ಕದಿಕಡ್ಕ, ಗಿರಿಧರ ಗೌಡ ವಿನೋಬನಗರ, ಆತ್ಮಾನಂದ ಗಬ್ಬಲಡ್ಕ, ಜಯರಾಮ ಕದಿಕಡ್ಕ ಸೇರಿದಂತೆ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಬಳಿಕ ಅಂಗನವಾಡಿ ಪುಟಾಣಿಗಳಿಗೆ ಕಪ್ಪೆ ಜಿಗಿತ, ಕಾಳು ಹೆಕ್ಕುವುದು, ಕಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ಕಪ್ಪೆ ಜಿಗಿತ, ಬಲೂನ್ ಒಡೆಯುವುದು, ಬಕೆಟ್ ಗೆ ಬಾಲ್ ಹಾಕುವುದು, ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ಬಾಲಕರಿಗೆ ಕಬಡ್ಡಿ, ಮೂರು ಕಾಲಿನ ಓಟ, ಬಾಲಕಿಯರಿಗೆ ಸಂಗೀತ ಕುರ್ಚಿ, ಮೂರು ಕಾಲಿನ ಓಟ, ಪ್ರೌಢಶಾಲಾ ಬಾಲಕರಿಗೆ ಕಬಡ್ಡಿ, ಮಡಿಕೆ ಒಡೆಯುವುದು, ಬಾಲಕಿಯರಿಗೆ ಮೂರು ಕಾಲಿನ ಓಟ, ಸಂಗೀತ ಕುರ್ಚಿ, ಸಾರ್ವಜನಿಕ ವಿಭಾಗದಲ್ಲಿ ಪುರುಷರಿಗೆ ಮಡಿಕೆ ಒಡೆಯುವುದು, ಕಬಡ್ಡಿ, ಹಗ್ಗಜಗ್ಗಾಟ , ಮಹಿಳೆಯರಿಗೆ ಮಡಿಕೆ ಒಡೆಯುವುದು, ಹಗ್ಗಜಗ್ಗಾಟ ಸ್ಪರ್ಧೆಗಳು ಜರುಗಿತು.

ಸಂಜೆ ನಡೆದ ಸಮಾರೋಪದಲ್ಲಿ ಕನಕಮಜಲು ಪ್ರಾ.ಕೃ.ಪ.ಸ.ಸಂಘದ ಉಪಾಧ್ಯಕ್ಷ ಕರುಣಾಕರ ರೈ ಕುಕ್ಕಂದೂರು ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷ ನಿಶಾಂತ್ ಮೋಂಟಡ್ಕ ಅವರು ಸ್ಪರ್ಧಾ ವಿಜೇತರುಗಳಿಗೆ ಬಹುಮಾನ ವಿತರಿಸಿದರು. ಸಹಕಾರಿ ಸಂಘದ ನಿರ್ದೇಶಕ ಸುಖೇಶ್ ಅಡ್ಕಾರುಪದವು, ಅವರು ಉಪಸ್ಥಿತರಿದ್ದರು.