ಅಜ್ಜಾವರ : ದೇವರಕಳಿಯ ಭಗವತಿ ಕ್ಷೇತ್ರದಲ್ಲಿ ವಿಶೇಷ ಕೃಷ್ಣ ಪೂಜೆ

0

ಪುಸ್ತಕ ಬಿಡುಗಡೆ ಕಾರ್ಯಕ್ರಮ

ಅಜ್ಜಾವರ ಗ್ರಾಮದ ದೇವರಕಳಿಯ ಚೈತನ್ಯ ಸೇವಾಶ್ರಮದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಇಲ್ಲಿಯ ಸ್ವಾಮೀಜಿ ಶ್ರೀ ಯೋಗೇಶ್ವರಾನಂದ ಸರಸ್ವತಿ ಸ್ವಾಮೀಜಿಯವರ ನೇತೃತ್ವದಲ್ಲಿ ಶ್ರೀ ಕೃಷ್ಣ ವಿಶೇಷ ಪೂಜಾ ಕಾರ್ಯಕ್ರಮ ಹಾಗೂ ಪುಸ್ತಕ ಬಿಡುಗಡೆ ಸನ್ಮಾನ ಕಾರ್ಯಕ್ರಮ ನಡೆಯಿತು.

ಚೈತನ್ಯ ಸೇವಾಶ್ರಮದ ಸ್ವಾಮೀಜಿ ಶ್ರೀ ಯೋಗೇಶ್ವರಾನಂದ ಸರಸ್ವತಿಯವರ 194 ನೇ ಕೃತಿ ಸ್ವಾಮಿ ಚೈತನ್ಯರ ಜೀವನ ಕಥನ ಮತ್ತು 195 ನೇ ಕೃತಿಮಾಲೆ ಧರ್ಮೊ ರಕ್ಷತಿ ರಕ್ಷಿತ: ಗಳನ್ನು ನಿವೃತ ಸಹಾಯಕ ಪೊಲೀಸ್ ಉಪನಿರೀಕ್ಷಕ ದೇವಯ್ಯಗೌಡ ಮತ್ತು ಕುಶಾಲಪ್ಪ ಗೌಡ ಅತ್ಯಾಡಿಯವರು ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ
ಸುಳ್ಯದ ಕೆವಿಜಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಟ್ರೈನಿಂಗ್ ಆಂಡ್ ಪ್ಲೇಸ್ ಮೆಂಟ್ ಆಫೀಸರ್ ಆಗಿರುವ ಹಾಗೂ ಅಜ್ಜಾವರ ಚೈತನ್ಯ ಸೇವಾಶ್ರಮದಲ್ಲಿ ಗ್ರಂಥ ಪ್ರಕಟಣೆ ಜವಾಬ್ದಾರಿ ನಿರ್ವಹಿಸುತ್ತಿರುವ ಅನಿಲ್ ಬಿ.ವಿ ಯವರು ಇತ್ತೀಚೆಗೆ ಡಾಕ್ಟರೇಟ್ ಪದವಿ ಪಡೆದಿದ್ದು, ಅವರನ್ನು ಚೈತನ್ಯ ಸೇವಾ ಶ್ರಮದ ಸ್ವಾಮೀಜಿ ಶ್ರೀ ಯೋಗೇಶ್ವರಾನಂದ ಸರಸ್ವತಿಯವರು ಆಶ್ರಮದ ವತಿಯಿಂದ ಸನ್ಮಾನಿಸಿದರು.

ಆಶ್ರಮದ ಟ್ರಸ್ಟಿ ಪ್ರಣವಿ, ಶಂಕರ್ ಪೆರಾಜೆ, ಜನಾರ್ದನ ಮಾಸ್ತರ್, ಆಶ್ರಮದ ಅಭಿಮಾನಿಗಳು ಊರವರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಸೇವಾಶ್ರಮದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಇಲ್ಲಿಯ ಸ್ವಾಮೀಜಿ ಶ್ರೀ ಯೋಗೇಶ್ವರಾನಂದ ಸರಸ್ವತಿ ಸ್ವಾಮೀಜಿಯವರ ನೇತೃತ್ವದಲ್ಲಿ ಶ್ರೀ ಕೃಷ್ಣ ವಿಶೇಷ ಪೂಜಾ ಕಾರ್ಯಕ್ರಮ ನಡೆಯಿತು.

ಪೂಜೆಯನ್ನು‌ ಶ್ರೀ ಯೋಗೇಶ್ವರಾನಂದ ಸರಸ್ವತಿಯವರ ಮಾರ್ಗದರ್ಶನದಲ್ಲಿ ಆಶ್ರಮದ ಟ್ರಸ್ಟಿ ಪ್ರಣವಿಯವರು ನೆರವೇರಿಸಿದರು.

ಬಳಿಕ ಭಜನಾ ಸತ್ಸಂಗ ಕಾರ್ಯಕ್ರಮ ನಡೆಯಿತು.