ಅಡ್ಕಾರು: ಮುಖ್ಯರಸ್ತೆ ಬದಿ ಜೆಸಿಬಿ ಮೂಲಕ ಮಣ್ಣು ದುರಸ್ತಿ ಕಾಮಗಾರಿ

0

ಜಾಲ್ಸೂರು ಗ್ರಾ.ಪಂ. ಅಧ್ಯಕ್ಷ -ಉಪಾಧ್ಯಕ್ಷ ಹಾಗೂ ಸದಸ್ಯರಿಂದ ವೀಕ್ಷಣೆ

ಜಾಲ್ಸೂರು ಗ್ರಾಮದ ಅಡ್ಕಾರಿನಲ್ಲಿ ರಸ್ತೆ ಅಪಘಾತ ಪ್ರಕರಣಗಳು ಹೆಚ್ಚುತ್ತಿದ್ದು, ಗ್ರಾಮ ಪಂಚಾಯತಿ ವತಿಯಿಂದ ಜೆಸಿಬಿ ಮೂಲಕ ರಸ್ತೆ ಬದಿಯಿದ್ದ ಮಣ್ಣು ದುರಸ್ತಿ ಕಾರ್ಯ ನಡೆಯುತ್ತಿದ್ದು, ಸೆ.8ರಂದು ಜಾಲ್ಸೂರು ಗ್ರಾ.ಪಂ. ಅಧ್ಯಕ್ಷೆ – ಉಪಾಧ್ಯಕ್ಷೆ ಹಾಗೂ ಸದಸ್ಯರುಗಳು ತೆರಳಿ ಪರಿಶೀಲನೆ ನಡೆಸಿದರು.

ಗ್ರಾಮ ಪಂಚಾಯತಿ ಅಧ್ಯಕ್ಷೆ ಶ್ರೀಮತಿ ತಿರುಮಲೇಶ್ವರಿ ಮರಸಂಕ, ಉಪಾಧ್ಯಕ್ಷೆ ಶ್ರೀಮತಿ ತಿರುಮಲೇಶ್ವರಿ ಅರ್ಭಡ್ಕ, ಗ್ರಾ.ಪಂ. ಕಾರ್ಯದರ್ಶಿ ಸುಂದರ ಮುಪ್ಪೇರ್ಯ, ಮಾಜಿ ಗ್ರಾ.ಪಂ. ಅಧ್ಯಕ್ಷ ಕೆ.ಎಂ. ಬಾಬು ಕದಿಕಡ್ಕ, ಸದಸ್ಯ ಎನ್.ಎಂ. ಸತೀಶ ಕೆಮನಬಳ್ಳಿ, ಸ್ಥಳೀಯರಾದ ಉಸ್ಮಾನ್ ಅಡ್ಕಾರು, ಶ್ಯಾಮ್ ನಂಗಾರು ಉಪಸ್ಥಿತರಿದ್ದರು.