ಹೆಡ್ ಕಾನ್ ಸ್ಟೇಬಲ್ ಬಾಲಕೃಷ್ಣ ಗೌಡ ಕೊಯಿಕುಳಿ ನಿಧನ

0


ದುಗ್ಗಲಡ್ಕದ ಕುಂಬೆತ್ತಿಬನ ನಿವಾಸಿ ಪುತ್ತೂರು ಡಿ ವೈ ಎಸ್ ಪಿ ಕಚೇರಿಯಲ್ಲಿ ಹೆಡ್ ಕಾನ್ ಸ್ಟೇಬಲ್ ಆಗಿ ಕರ್ತವ್ಯದಲ್ಲಿದ್ದ ಬಾಲಕೃಷ್ಣ ಗೌಡ ಕೊಯಿಕುಳಿ ಇಂದು ಮುಂಜಾನೆ ಹೃದಯಾಘಾತದಿಂದ ನಿಧನರಾದರು. ಅವರಿಗೆ 57 ವರ್ಷ ವಯಸ್ಸಾಗಿತ್ತು.


ಮುಂಜಾನೆ ಸುಮಾರು 5 ಗಂಟೆಯ ವೇಳೆಗೆ ಅಸ್ವಸ್ಥರಾದ ಅವರನ್ನು ಮನೆಯವರು ಸುಳ್ಯ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋದರು. ಅಲ್ಲಿ ಅವರು ಕೊನೆಯುಸಿರೆಳೆದರು. ಹೃದಯಾಘಾತದಿಂದ ಮೃತರಾಗಿರುವುದಾಗಿ ತಿಳಿದುಬಂದಿದೆ.

ಬಾಲಕೃಷ್ಣ ಗೌಡರು ಸುಳ್ಯ ಪೋಲೀಸ್ ಠಾಣೆ ಸಿಬ್ಬಂದಿ. ನಿಯೋಜನೆ ಮೇರೆಗೆ ಪುತ್ತೂರಿನಲ್ಲಿ ಕರ್ತವ್ಯದಲ್ಲಿದ್ದರು. ಮೂರು ದಿನಗಳ ಹಿಂದೆ ಅವರು ಮತ್ತೆ ಸುಳ್ಯ ಠಾಣೆಗೆ ಕರ್ತವ್ಯಕ್ಕೆ‌ ಬಂದಿದ್ದರು.


ಅವರು ಪತ್ನಿ ಮೀನಾಕ್ಷಿ, ಪುತ್ರರಾದ ಹೇಮಂತ್, ಜಯಂತ್ , ಸಹೋದರ ಬಾಲಚಂದ್ರ ಹಾಗೂ ಬಂಧುಗಳನ್ನು ಅಗಲಿದ್ದಾರೆ.