ದ.ಕ.ಸಂಪಾಜೆ ವಲಯ ಕಾಂಗ್ರೆಸ್ ನಿಯೋಗದಿಂದ ಸಚಿವರಾದ ಜಮೀರ್ ಅಹ್ಮದ್ ಖಾನ್ ಭೇಟಿ, ಸಂಪಾಜೆ ಗ್ರಾಮಕ್ಕೆ 50 ಲಕ್ಷ ರೂ.ಗಳ ಅನುದಾನಕ್ಕಾಗಿ ಮನವಿ

0

ಕರ್ನಾಟಕ ಸರ್ಕಾರದ ವಸತಿ, ವಕ್ಫ್ ಹಾಗೂ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಸಚಿವರಾದ ಜಮೀರ್ ಅಹ್ಮದ್ ಖಾನ್ ಅವರನ್ನು ದ.ಕ.ಸಂಪಾಜೆ ವಲಯ ಕಾಂಗ್ರೆಸ್ ಅಧ್ಯಕ್ಷರಾದ ಸೋಮಶೇಖರ್ ಕೊಯಿಂಗಾಜೆ ಅವರ ನೇತೃತ್ವದ ನಿಯೋಗವು ಇತ್ತೀಚೆಗೆ ಬೆಂಗಳೂರಿನ ಕೆ.ಪಿ.ಸಿ.ಸಿ.ಕಚೇರಿಯಲ್ಲಿ ಭೇಟಿ ಮಾಡಿ ಸಂಪಾಜೆ ಗ್ರಾಮದ ಅಭಿವೃದ್ಧಿಗಾಗಿ 50 ಲಕ್ಷ ರೂ.ಗಳ ಅನುದಾನವನ್ನು ಒದಗಿಸುವಂತೆ ಮನವಿಯನ್ನು ಮಾಡಿತ್ತು, ಇದೀಗ ಮನವಿಗೆ ಸ್ಪಂದಿಸಿದ ಸಚಿವರಾದ ಜಮೀರ್ ಅಹ್ಮದ್ ಖಾನ್ ಅವರು ತಮ್ಮ ಇಲಾಖೆಯ ಯೋಜನೆಗಳ ಮೂಲಕ ಅನುದಾನವನ್ನು ಒದಗಿಸುವುದಾಗಿ ನಿಯೋಗಕ್ಕೆ ತಿಳಿಸಿರುತ್ತಾರೆಂದು ತಿಳಿದು ಬಂದಿದೆ.

ಈ ಸಂದರ್ಭ ಕರ್ನಾಟಕ ಸರ್ಕಾರದ ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಸದಸ್ಯರಾದ ಕೆ.ಪಿ.ಜಾನಿ ಕಲ್ಲುಗುಂಡಿ, ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಕುಂಞ ಗೂನಡ್ಕ, ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷರಾದ ಎ.ಕೆ.ಇಬ್ರಾಹಿಂ ಕಲ್ಲುಗುಂಡಿ, ಕಾಂಗ್ರೆಸ್ ಪ್ರಮುಖರಾದ ವಸಂತ ಗೌಡ ಪೆಲ್ತಡ್ಕರವರು ಉಪಸ್ಥಿತರಿದ್ದರು.