ಸೆ.16 ರಂದು ಸುಳ್ಯ ವಿಶ್ವ ಹಿಂದೂ ಪರಿಷತ್ ಬಜರಂಗದಳ ವತಿಯಿಂದ 10 ನೇ ವರ್ಷದ ಮೊಸರು ಕುಡಿಕೆ ಉತ್ಸವ-ಅದ್ದೂರಿಯ ಶೋಭಾಯಾತ್ರೆ

0

ವಿಶ್ವ ಹಿಂದೂ ಪರಿಷತ್ ಬಜರಂಗದಳ ಸುಳ್ಯ ಪ್ರಖಂಡದ ವತಿಯಿಂದ ಮೊಸರು ಕುಡಿಕೆ ಉತ್ಸವ ಸಮಿತಿ ಇದರ ಆಶ್ರಯದಲ್ಲಿ
ವಿಶ್ವ ಹಿಂದೂ ಪರಿಷತ್ತಿನ ಸ್ಥಾಪನಾ ದಿನಾಚರಣೆಯ ಅಂಗವಾಗಿ 10ನೇ ವರುಷದ ಸುಳ್ಯ ಮೊಸರು ಕುಡಿಕೆ ಉತ್ಸವ ವು ಸೆ. 16 ರಂದು ಸುಳ್ಯದಲ್ಲಿ ನಡೆಯಲಿದ್ದು ಸೆ.9 ರಂದು ಸುಳ್ಯ ಪ್ರೆಸ್ ಕ್ಲಬ್ ನಲ್ಲಿ ಸಮಿತಿ ವತಿಯಿಂದ ಪತ್ರಿಕಾಗೋಷ್ಠಿ ನಡೆಸಲಾಯಿತು.

ಮೊಸರು ಕುಡಿಕೆ ಉತ್ಸವದ ಶೋಭಾಯಾತ್ರೆಗೆ
ಅಪರಾಹ್ನ 2 ಗಂಟೆಗೆ ಸರಿಯಾಗಿ
ಶ್ರೀ ಚೆನ್ನಕೇಶವ ದೇವಸ್ಥಾನದ ಅನುವಂಶಿಕ ಮೊಕ್ತೇಸರ
ಡಾ. ಹರಪ್ರಸಾದ್ ತುದಿಯಡ್ಕ ರವರು ಚಾಲನೆ ನೀಡಲಿದ್ದಾರೆ.

ಸಂಜೆ ಗಂಟೆ 6.00 ರಿಂದ ಚೆನ್ನಕೇಶವ ದೇವಸ್ಥಾನದ ಮುಂಭಾಗದಲ್ಲಿ ಧಾರ್ಮಿಕ ಸಭೆಯು ಮೊಸರು ಕುಡಿಕೆ ಉತ್ಸವ ಸಮಿತಿ ಅಧ್ಯಕ್ಷ ತೀರ್ಥಕುಮಾರ್ ಕುಂಚಡ್ಕ ರವರ ಅಧ್ಯಕ್ಷತೆಯಲ್ಲಿ ನಡೆಯಲಿರುವುದು.


ಖ್ಯಾತ ವಾಗ್ಮಿ ವಿಶ್ವ ಹಿಂದೂ ಪರಿಷತ್ ಜಿಲ್ಲಾ ಸತ್ಸಂಗ ಪ್ರಮುಖ್ ಸೂರ್ಯನಾರಾಯಣ ಭಟ್ ಕಶೆಕೋಡಿ ಯವರು ಈ ಸಂದರ್ಭದಲ್ಲಿ ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ. ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಕು. ಭಾಗೀರಥಿ ಮುರುಳ್ಯ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಲಿರುವರು. ಮುಖ್ಯ ಅತಿಥಿಗಳಾಗಿ ಸ್ವದೇಶಿ ಗೋ ಸಂರಕ್ಷಕ
ಕೆ. ವಿಶ್ವನಾಥ ಪೈ ಐವರ್ನಾಡು, ವಿಶ್ವ ಹಿಂದೂ ಪರಿಷತ್ ಪುತ್ತೂರು ಜಿಲ್ಲೆಯ ಅಧ್ಯಕ್ಷ ಡಾ| ಕೃಷ್ಣಪ್ರಸನ್ನ ಉಪಸ್ಥಿತರಿರುವರು ಎಂದು ಬಜರಂಗದಳ ಸಂಯೋಜಕ್ ಹರಿಪ್ರಸಾದ್ ಎಲಿಮಲೆ ಕಾರ್ಯಕ್ರಮದ ವಿವರ ನೀಡಿದರು.

ಮೊಸರು ಕುಡಿಕೆ ಉತ್ಸವದ ಶೋಭಾ ಯಾತ್ರೆಯ ಪಥವು ಚೆನ್ನಕೇಶವ ದೇವಸ್ಥಾನದಿಂದ ಮೊದಲ್ಗೊಂಡು ಎಪಿಎಂಸಿ ಕುರುಂಜಿಭಾಗ್, ವಿವೇಕಾನಂದ ಸರ್ಕಲ್, ಜೂನಿಯರ್ ಕಾಲೇಜ್ ರಸ್ತೆ, ಮುಳಿಯ ಮೈದಾನ ಶಾಸ್ತ್ರಿ ವೃತ್ತ, ವಿಶ್ವ ಸೆಂಟ್ರಲ್ ಶ್ರೀರಾಮಪೇಟೆ ಸುಳ್ಯ, ಶ್ರೀಹರಿ ಕಾಂಪ್ಲೆಕ್ಸ್, ರಾಜಶ್ರೀ ಕಾಂಪ್ಲೆಕ್ಸ್, ಪಂಚಾಯತ್ ಬಸ್ ನಿಲ್ದಾಣ, ನಾಯರ್ ಕಾಂಪ್ಲೆಕ್ಸ್, ಗಾಂಧಿನಗರ, ಐಡಿಯಲ್ ಆಟೋ ವರ್ಕ್ಸ್ , ಭಗವತಿ ಹಾರ್ಡ್ ವೇರ್ಸ್ ರಥ ಬೀದಿ ಮುಂತಾದ ಕಡೆಗಳಲ್ಲಿ ವೀರ ಯುವಕರಿಂದ ಸಾಹಸಮಯ ಅಟ್ಟಿ ಮಡಕೆ ಒಡೆಯುವ ಆಕರ್ಷಕ ಸ್ಪರ್ಧೆಯು ನಡೆಯಲಿರುವುದಾಗಿ ವಿ.ಹೆಚ್.ಪಿ ಅಧ್ಯಕ್ಷ ಸೋಮಶೇಖರ ಪೈಕ ತಿಳಿಸಿದರು.

ವಿಶೇಷವಾಗಿ ಚೆನ್ನಕೇಶವ ದೇವಸ್ಥಾನದ ಮುಂಭಾಗದಲ್ಲಿ ಆಕರ್ಷಣೀಯ ಅಟ್ಟಿ ಮಡಿಕೆ ಒಡೆಯುವ ಕಾರ್ಯಕ್ರಮವು ಹಾಗೂ ಮೊಸರು ಕುಡಿಕೆ ಉತ್ಸವ ಸಮಿತಿಯ ಪೂರ್ವಾಧ್ಯಕ್ಷರನ್ನು ಗೌರವಿಸಿ ಸನ್ಮಾನಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು.
ಸ್ಪರ್ಧೆಯಲ್ಲಿ ವಿಜೇತ ತಂಡಗಳಿಗೆ ಪ್ರಥಮ ರೂ. 15,000 ಮತ್ತು ಶಾಶ್ವತ ಫಲಕ, ದ್ವಿತೀಯ ರೂ. 10,000 ಮತ್ತು ಶಾಶ್ವತ ಫಲಕ, ತೃತೀಯ ರೂ.7,000 ಮತ್ತು ಶಾಶ್ವತ ಫಲಕ ಹಾಗೂ ಭಾಗವಹಿಸಿದ ಎಲ್ಲಾ ತಂಡಗಳಿಗೆ ಸಮಾಧಾನಕರ ಬಹುಮಾನ ನೀಡಲಾಗುವುದು ಎಂದು ಸಮಿತಿಯ ಅಧ್ಯಕ್ಷ ತೀರ್ಥ ಕುಮಾರ್ ಕುಂಚಡ್ಕ ರವರು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮೊಸರು ಕುಡಿಕೆ ಉತ್ಸವ ಸಮಿತಿ ಉಪಾಧ್ಯಕ್ಷ ರಜತ್ ಅಡ್ಕಾರ್, ಪ್ರಧಾನ ಕಾರ್ಯದರ್ಶಿದೇವಿಪ್ರಸಾದ್ ಅತ್ಯಾಡಿ, ವ್ಯವಸ್ಥಾ ಪ್ರಮುಖರಾದ ಸನತ್ ಚೊಕ್ಕಾಡಿ, ಭಾನುಪ್ರಕಾಶ್ ಪೆರುಮುಂಡ, ನಗರ ಬಜರಂಗದಳ ಸಂಚಾಲಕ ವರ್ಷಿತ್ ಚೊಕ್ಕಾಡಿ ,ಭಾನುಪ್ರಕಾಶ್ ಪೆರುಮುಂಡ ಉಪಸ್ಥಿತರಿದ್ದರು.