ಕಲ್ಲೇರಿ : 19ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

0


ಎಣ್ಮೂರು ಗ್ರಾಮದ ಕಲ್ಲೇರಿ ಶ್ರೀ ಗಣೇಶ್ ಫ್ರೆಂಡ್ಸ್ ಸರ್ಕಲ್ ಇದರ ಆಶ್ರಯದಲ್ಲಿ 19ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ ಹಾಗೂ ಸಾರ್ವಜನಿಕರಿಗೆ ಆಟೋಟ ಸ್ಪರ್ಧೆಗಳು ನಡೆಯಿತು. ಲೋಕಯ್ಯಗೌಡ ಶೃಂಗೇರಿ ದೀಪ ಪ್ರಜ್ವಲನೆ ಮಾಡಿದರು.


ಸಂಘದ ಅಧ್ಯಕ್ಷ ಪ್ರಕಾಶ್ ರೈ ಕುಲೈತ್ತೋಡಿ ಅಧ್ಯಕ್ಷತೆ ವಹಿಸಿದ್ದರು. ಪಡ್ಪಿನಂಗಡಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಕಾರ್ಯಪ್ಪ ಗೌಡ ಮುಖ್ಯ ಅತಿಥಿಗಳಾಗಿದ್ದರು.


ಕಲ್ಲೇರಿ ಗುಳಿಗ ಕಟ್ಟೆಯ ಪರಿಚಾರಕ ತಿಮ್ಮಪ್ಪ ಗೌಡ ಆರೆಂಬಿ, ಕಾರ್ಯದರ್ಶಿ ಸುರೇಶ್ ರೈ ಚಾಮೆತಡ್ಕ ವೇದಿಕೆಯಲ್ಲಿದ್ದರು. ಪ್ರದೀಪ್ ರೈ ಎಣ್ಮೂರು ಪ್ರಾರ್ಥಿಸಿ, ಕಾರ್ಯಕ್ರಮ ನಿರೂಪಿಸಿದರು. ರಾಮಕೃಷ್ಣ ಪೂಜಾರಿ ಸ್ವಾಗತಿಸಿದರು. ಕಾರ್ತಿಕ್ ರೈ ಕಲ್ಲೇರಿ ವಂದಿಸಿದರು.