ಭಾಲಾವಲೀಕಾರ್ ರಾಜಾಪುರ ಸಾರಸ್ವತ ಯುವ ಸಮಾಜದ ವತಿಯಿಂದ ಆಟೋಟ ಸ್ಪರ್ಧೆ ಹಾಗೂ ಮನೋರಂಜನಾ ಕಾರ್ಯಕ್ರಮ

0


ಭಾಲಾವಲೀಕಾರ್ ರಾಜಾಪುರ ಸಾರಸ್ವತ ಯುವ ಸಮಾಜ ಸುಳ್ಯ ಇದರ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಹಾಗೂ ಗಣೇಶ ಚತುರ್ಥಿ ಪ್ರಯುಕ್ತ ಸೆ. ೧೦ ರಂದು ಆಟೋಟ ಹಾಗೂ ಮನೋರಂಜನಾ ಕಾರ್ಯಕ್ರಮವು ಶ್ರೀ ದುರ್ಗಾಪರಮೇಶ್ವರಿ ಕಲಾಮಂದಿರದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಕೃಷ್ಣವೇಷ ಸ್ಪರ್ಧೆ ಹಾಗೂ ಇನ್ನಿತರ ಸ್ಪರ್ಧೆಗಳಲ್ಲಿ ಸಮಾಜ ಬಾಂಧವರು ಆಸಕ್ತಿಯಿಂದ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಸಮಾಜದ ಅನೇಕ ಗಣ್ಯರು ಭಾಗವಹಿಸಿದ್ದರು.


ಸಮಾರೋಪ ಸಮಾರಂಭದಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಕು. ಭಾಗೀರಥಿ ಮುರುಳ್ಯರವರು, ಮಾಜಿ ವಿಧಾನ ಪರಿಷತ್ ಸದಸ್ಯರಾದ ಅಣ್ಣಾ ವಿನಯಚಂದ್ರ, ಉದ್ಯಮಿಗಳಾದ ಪೊಸವಳಿಕೆ ಗೋಪಾಲಕೃಷ್ಣ ನಾಯಕ್, ಭಾಲಾವಲೀಕಾರ್ ರಾಜಾಪುರ ಸಾರಸ್ವತ ಸಮಾಜ ಸುಳ್ಯ ಇದರ ಅಧ್ಯಕ್ಷರಾದ ಹೇಮಂತ್ ಕುಮಾರ್ ಕಂದಡ್ಕ, ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ ಕೇರ್ಪಳ ಇದರ ಅಧ್ಯಕ್ಷರಾದ ದೇವದಾಸ್ ಪ್ರಭು, ಶ್ರೀ ದುರ್ಗಾಪರಮೇಶ್ವರಿ ಮಹಿಳಾ ಮಂಡಳಿ ಸುಳ್ಯ ಇದರ ಅಧ್ಯಕ್ಷರಾದ ಶ್ರೀಮತಿ ಅನಿತಾ ಕಾಯರ್ತೋಡಿ ಭಾಗವಹಿಸಿದ್ದರು. ಶಾಸಕರಿಗೆ ಸಮಾಜದ ವತಿಯಿಂದ ಅಭಿನಂದನಾ ಕಾರ್ಯಕ್ರಮವು ನಡೆಯಿತು.


೨೦೨೨-೨೩ನೇ ಶೈಕ್ಷಣಿಕ ವರ್ಷದಲ್ಲಿ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ತರಗತಿಗಳಲ್ಲಿ ಅತಿ ಹೆಚ್ಚು ಅಂಕ ಪಡೆದ ಸುಳ್ಯ ತಾಲೂಕಿನ ಸ್ವಸಮಾಜದ ತಲಾ ಇಬ್ಬರು ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು.