ಸಂಪಾಜೆ ವಲಯ ಕಾಂಗ್ರೆಸ್ ಸಮಿತಿಯ ವತಿಯಿಂದ ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿ ರಾಜ್ಯ ಸಮಿತಿಯ ಸದಸ್ಯ ಕೆ.ಪಿ.ಜಾನಿ ಅವರಿಗೆ ಸನ್ಮಾನ

0

ಕರ್ನಾಟಕ ಸರ್ಕಾರದ ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ರಾಜ್ಯ ಸದಸ್ಯರಾಗಿ ನೇಮಕಗೊಂಡ ಕೆ.ಪಿ. ಜಾನಿ ಕಲ್ಲುಗುಂಡಿಯವರಿಗೆ
ಸಂಪಾಜೆ ವಲಯ ಕಾಂಗ್ರೆಸ್ ಸಮಿತಿಯ ವತಿಯಿಂದ ಸೆ.11ರಂದು ಸನ್ಮಾನಿಸಿ, ಗೌರವಿಸಲಾಯಿತು.

ಸುಳ್ಯ ಬ್ಲಾಕ್ ಕಾಂಗ್ರೆಸ್ ಮಾಜಿ ಉಪಾಧ್ಯಕ್ಷರು, ಹಾಗೂ ಕಾರ್ಮಿಕ ನಾಯಕರಾದ ಸಂಪಾಜೆ ಗ್ರಾಮದ ಕೆ.ಪಿ.ಜಾನಿ ಕಲ್ಲುಗುಂಡಿಯವರಿಗೆ ಸಂಪಾಜೆ ವಲಯ ಕಾಂಗ್ರೆಸ್ ವತಿಯಿಂದ ಅಭಿನಂದನಾ ಸಭೆಯು ಕಲ್ಲುಗುಂಡಿಯ ಸಮನ್ವಯ ಸಹಕಾರಿ ಸಭಾಭವನದಲ್ಲಿ ನಡೆಯಿತು.


ಸಂಪಾಜೆ ವಲಯ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಸೋಮಶೇಖರ ಕೊಯಿಂಗಾಜೆ ಅವರು ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ದ.ಕ.ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಮಹಮ್ಮದ್ ಕುಂಞಿ ಗೂನಡ್ಕ,
ಕೆ.ಪಿ. ಸಿ. ಸಿ. ಮಾಧ್ಯಮ ವಕ್ತಾರ ಶೌವಾದ್ ಗೂನಡ್ಕ, ಜಿಲ್ಲಾ ಅಲ್ಪಸಂಖ್ಯಾತ ಕಾಂಗ್ರೆಸ್ ಉಪಾಧ್ಯಕ್ಷ ಎ.ಕೆ.ಇಬ್ರಾಹಿಂ, ಸಂಪಾಜೆ ಗ್ರಾ.ಪಂ. ಮಾಜಿ ಅಧ್ಯಕ್ಷೆ ಯಮುನಾ, ಗ್ರಾ.ಪಂ. ಮಾಜಿ ಉಪಾಧ್ಯಕ್ಷೆ ಶ್ರೀಮತಿ ಲಿಸ್ಸಿ ಮೊನಾಲಿಸಾ,ಕೊಡಗು ಜಿಲ್ಲಾ ಸಾಮಾಜಿಕ ಜಾಲತಾಣ ಅಧ್ಯಕ್ಷ ಸೂರಜ್ ಹೊಸೂರು ,ಕಾರ್ಮಿಕ ಜಿಲ್ಲಾ ಮುಖಂಡ ಶ್ರೀಧರ ಕಡೆಪಾಲ,ಜಿಲ್ಲಾ ಕಾಂಗ್ರೆಸ್ ಅಸಂಘಟಿತ ಘಟಕ ಪ್ರಧಾನ ಕಾರ್ಯದರ್ಶಿ ರಾಜು ನೆಲ್ಲಿಕುಮೇರಿ, ಚೆಂಬು ವಲಯ ಕಾಂಗ್ರೇಸ್ ಅಧ್ಯಕ್ಷ ರವಿ ಹೊಸೂರು, ವಸಂತ ಪೆಲ್ತಡ್ಕ, ಸಂಪಾಜೆ ಸೊಸೈಟಿ ನಿರ್ದೇಶಕ ಎಸ್.ಎ. ಹಮೀದ್, ರೈತ ಸಂಘದ ಮುಖಂಡ ವಸಂತ ಪೆಲ್ತಡ್ಕ, ಎ.ಕೆ.ಹನೀಫ್, ಸಂಪಾಜೆ ವಲಯ ಮಹಿಳಾ ಘಟಕದ ಅಧ್ಯಕ್ಷೆ ಶ್ರೀಮತಿ ಯಮುನ ಉಪಸ್ಥಿತರಿದ್ದರು.