ಮುರುಳ್ಯದಲ್ಲಿ ಮೊಸರು ಕುಡಿಕೆ ಕಾರ್ಯಕ್ರಮ

0

ಮುರುಳ್ಯದ ಶ್ರೀರಾಮ ಫ್ರೆಂಡ್ಸ್ ಮೊಸರು ಕುಡಿಕೆ ಕಾರ್ಯಕ್ರಮವು ಮುರುಳ್ಯದ ಶ್ರೀ ರಾಮಾಂಜನೇಯ ಭಜನಾ ಮಂದಿರ ಶಾಂತಿನಗರದಲ್ಲಿ ಸೆ.10ರಂದು ನಡೆಯಿತು. ಈ ಸಂದರ್ಭದಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಕುಮಾರಿ ಭಾಗೀರಥಿ ಮುರುಳ್ಯ ಅವರನ್ನು ಸನ್ಮಾನಿಸಲಾಯಿತು.

ಸಮಿತಿಯ ಅಧ್ಯಕ್ಷರಾದ ಆನಂದ ಕುಲಾಲ್ ಶಾಂತಿನಗರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಗೇರ್ ಮಹಾವಿಷ್ಣು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ರಾಕೇಶ್ ರೈ ಕೆಡೆಂಜಿ, ಕೇರ್ಪಡ ಶ್ರೀ ಮಹಿಷಮರ್ದಿನಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ವಸಂತ ನಡುಬೈಲು,

ಮುರುಳ್ಯ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ವನಿತಾ ಸುವರ್ಣ ಬಾಮೂಲೆ, ಶ್ರೀ ಕೃಷ್ಣ ಜನ್ಮಾಷ್ಟಮಿ ಉತ್ಸವ ಸಮಿತಿಯ ಕಾರ್ಯದರ್ಶಿ ದೀರಾಜ್ ಮಾಲ್ಯತ್ತಾರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕೀರ್ತನ್ ಕಳತ್ತಜೆ ಸ್ವಾಗತಿಸಿ, ಪ್ರದೀಪ್ ಎಣ್ಮೂರು ವಂದಿಸಿ, ಕಾರ್ಯಕ್ರಮದ ನಿರ್ವಹಿಸಿದರು.