ಅ.1: ರಂದು ಸುಳ್ಯ ಪಾಟಾಳಿ ಯಾನೆ ಗಾಣಿಗ ಸಮಾಜದ ವತಿಯಿಂದ ಗಾಣಿಗ ಸಮ್ಮಿಲನ 2023- ವಾರ್ಷಿಕ ಮಹಾಸಭೆ

0

ಕ್ರೀಡೋತ್ಸವ ಮತ್ತು ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ

ಸುಳ್ಯ ಪಾಟಾಳಿಯಾನೆ ಗಾಣಿಗ ಸಮಾಜ ಸೇವಾ ಸಂಘದ ವಾರ್ಷಿಕ ಮಹಾಸಭೆ ಹಾಗೂ ಗಾಣಿಗ ಸಮ್ಮಿಲನ 2023 ರ ಕಾರ್ಯಕ್ರಮವು ಅ.1 ರಂದು ಸುಳ್ಯ ಕೇರ್ಪಳ ದುರ್ಗಾಪರಮೇಶ್ವರಿ ಕಲಾ ಮಂದಿರದಲ್ಲಿ ನಡೆಯಲಿದ್ದು ಸುಳ್ಯ ಪ್ರೆಸ್ ಕ್ಲಬ್ ನಲ್ಲಿ ಸೆ.14 ರಂದು ಪತ್ರಿಕಾಗೋಷ್ಠಿ ನಡೆಸಲಾಯಿತು.

ಪತ್ರಿಕಾಗೋಷ್ಠಿಯಲ್ಲಿ ಪಾಟಾಳಿ ಯಾನೆ ಗಾಣಿಗ ಸಮಾಜ ಸೇವಾ ಸಂಘದ ಅಧ್ಯಕ್ಷ ಚಂದ್ರಶೇಖರ ಉದ್ದಂತಡ್ಕ ರವರು ಸುಳ್ಯದಲ್ಲಿ ಪ್ರಥಮ ಬಾರಿಗೆ ರಾಜ್ಯ ಮಟ್ಟದ ಸಮಾಜ ಬಾಂಧವರು ಭಾಗವಹಿಸುವ ಗಾಣಿಗ ಸಮ್ಮಿಲನ 2023 ಕಾರ್ಯಕ್ರಮದ ಆಯೋಜಿಸಲಾಗಿದೆ. ಜಿಲ್ಲೆ ಮತ್ತು ರಾಜ್ಯದ ಸಂಘದ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ. ಪಕ್ಕದ ಕೇರಳ ರಾಜ್ಯದಿಂದ ನಮ್ಮ ಸಮಾಜ ಬಾಂಧವರು ಪಾಲ್ಗೊಳ್ಳುವ ನೀರಿಕ್ಷೆ ಇದೆ. ಸಮಾಜ ಬಾಂಧವರನ್ನು ಒಟ್ಟು ಸೇರಿಸಿಕೊಂಡು ಕಟ್ಟ ಕಡೆಯ ವ್ಯಕ್ತಿಗಳನ್ನು ಸಮಾಜದಲ್ಲಿ ಮುಖ್ಯ ವಾಹಿನಿಗೆ ತರುವುದೇ ಸಮ್ಮಿಲನದ ಉದ್ದೇಶವಾಗಿದೆ. ಸಮಾಜ ಬಾಂಧವರಿಗೆ ಸರಕಾರದ ಮಟ್ಟದಲ್ಲಿ ಮಾನ್ಯತೆ ದೊರಕಿಸುವ ನಿಟ್ಟಿನಲ್ಲಿ ರಾಜ್ಯಮಟ್ಟದಲ್ಲಿ ಸಂಘದ ವತಿಯಿಂದ ಮನವಿ ನೀಡಲಾಗಿದೆ. ಸಂಘದ ವತಿಯಿಂದ ವಿದ್ಯಾನಿಧಿ, ಆರೋಗ್ಯ ನಿಧಿ ಮತ್ತು ಪ್ರತಿಭಾ ಪುರಸ್ಕಾರ ನೀಡಲಾಗುವುದು.
ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಮಾಜದ ಹಿರಿಯ ಕಿರಿಯ ಸಾಧಕರನ್ನು ಗುರುತಿಸಿ ಸನ್ಮಾನಿಸಲಾಗುವುದು ಎಂದು ವಿವರ ನೀಡಿದರು.

ಸಮ್ಮಿಲನ ಕಾರ್ಯಕ್ರಮದ ಪೂರ್ವಭಾವಿಯಾಗಿ ಸಮಾಜ ಬಾಂಧವರಿಗೆ ಕ್ರೀಡೋತ್ಸವ ವಿವಿಧ ಸ್ಪರ್ಧೆಗಳನ್ನು ಆಯೋಜನೆ ಮಾಡಲಾಗುತ್ತದೆ. ಕಾರ್ಯಕ್ರಮದಲ್ಲಿ 3ರಿಂದ 5 ಸಾವಿರ ಮಂದಿ ಸೇರುವ ಸಾಧ್ಯತೆ ಇದೆ ಎಂದು ಕಾರ್ಯದರ್ಶಿ ಸುರೇಶ್ ಕರ್ಲಪ್ಪಾಡಿ ತಿಳಿಸಿದರು.
ಬೆಳಗ್ಗೆಸಂಘದ ವಾರ್ಷಿಕ ಮಹಾಸಭೆಯು ಚಂದ್ರಶೇಖರ ಉದ್ದಂತಡ್ಕ ರವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಮುಖ್ಯ ಅತಿಥಿಗಳಾಗಿ ಹಿರಿಯರಾದ ಶಂಕರ ಪಾಟಾಳಿಪರಿವಾರಕಾನ,ಅಪ್ಪು ಮಾಸ್ತರ್
ಜಯನಗರ, ಮಹಾಲಿಂಗ ದೇರೆಬೈಲು, ಚಂದ ಕುಡೆಕಲ್ಲು, ಆಂತರಿಕ ಲೆಕ್ಕ ಪರಿಶೋಧಕ ಮಹಾಲಿಂಗನ್ ಬಾಜರ್ತೊಟ್ಟಿ ಉಪಸ್ಥಿತರಿರುವರು.
ಈಸಂದರ್ಭದಲ್ಲಿಆರೋಗ್ಯ ನಿಧಿ ಹಾಗೂ ಪ್ರತಿಭಾ ಪುರಸ್ಕಾರವಿತರಿಸಲಾಗುವುದು.ಮುಂದಿನ ಅವಧಿಗೆ ನೂತನ ಸಮಿತಿಯ ರಚನೆ ಮಾಡಲಾಗುವುದು ಎಂದು ಚಂದ್ರಶೇಖರ ಪನ್ನೆ ತಿಳಿಸಿದರು.

ಬೆಳಗ್ಗೆ ಗಂಟೆ 10.00 ಕ್ಕೆ ಗಾಣಿಗ ಸಮ್ಮಿಲನ 2023 ರ ಉದ್ಘಾಟನೆಯನ್ನು ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ
ಕು. ಭಾಗೀರಥಿ ಮುರುಳ್ಯ ನೆರವೇರಿಸಲಿದ್ದಾರೆ.
ಬೆಂಗಳೂರು ಶ್ರೀ ಕ್ಷೇತ್ರ
ತೈಲೇಶ್ವರ ಗಾಣಿಗರ ಮಹಾ ಸಂಸ್ಥಾನ ಮಠದ ಶ್ರೀ ಶ್ರೀ ಶ್ರೀ ಪೂರ್ಣಾನಂದ ಪುರಿ ಮಹಾಸ್ವಾಮೀಜಿ ಯವರು ಆಶೀರ್ವಚನ ನೀಡಲಿದ್ದಾರೆ. ಚಂದ್ರಶೇಖರ್
ಉದ್ದಂತಡ್ಕ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಬೆಂಗಳೂರು ಗಾಣಿಗ ಸಂಘದ ಅಧ್ಯಕ್ಷ ರಾಜಶೇಖರ್, ಮಾಜಿ ಸ್ಪೀಕರ್ ಸುದರ್ಶನ್, ಬೆಂಗಳೂರು ಗಾಣಿಗ ಸಂಘದ ಉಪಾಧ್ಯಕ್ಷ ಅಂಕ ಶೆಟ್ಟಿ, ಗಾಣಿಗ ಸಂಘ ಜಿಲ್ಲಾಧ್ಯಕ್ಷ ವಿಶ್ವಾಸ್ ದಾಸ್ ,
ಸ್ವಾಗತ ಸಮಿತಿ ಸಂಚಾಲಕ ಶಂಕರ ಪಾಟಾಳಿ ಪರಿವಾರಕಾನ, ಪುತ್ತೂರು ಸ.ಪ್ರ.ಕಾಲೇಜ್ ಪ್ರಾಂಶುಪಾಲ ಅಪ್ಪು ಪಾಟಾಳಿ ಜಯನಗರ, ನಿವೃತ್ತ ಉಪ ತಹಶೀಲ್ದಾರ್ ಮಹಾಲಿಂಗ ದೇರೆ ಬೈಲು, ಪೆರ್ಣೆ ಭಗವತಿ ಕ್ಷೇತ್ರದ ಕರಣಿಕ ಚಂದ ಕುಡೆಕಲ್ಲು, ಸಂಘದ ಆಂತರಿಕ ಲೆಕ್ಕ ಪರಿಶೋಧಕ ಮಹಾಲಿಂಗನ್ ಬಾಜರ್ತೊಟ್ಟಿ, ಸ್ವಿಗ್ಗಿ ಇಂಡಿಯಾ ನಿರ್ದೇಶಕ ಪ್ರೀತಮ್ ಕೆ ಎಸ್, ಚಾರ್ಟೆಡ್ ಅಕೌಂಟ್ ದಯಾನಂದ ಕೆ, ಮಂಗಳೂರು ವಾಣಿಯ ಗಾಣಿಗ ಸಂಘ ಅಧ್ಯಕ್ಷ ರಾಮ ಮುಗ್ರೋಡಿ, ಪುತ್ತೂರು ಅಧ್ಯಕ್ಷ ಪ್ರಸಾದ್ ಬಾಕಿ ಮಾರ್, ವಿಟ್ಲ ಅಧ್ಯಕ್ಷ ಉದಯ ದಂಬೆ, ಈಶ್ವರಮಂಗಲ ಅಧ್ಯಕ್ಷ ಮಹಾಲಿಂಗ ಈಶ್ವರಮಂಗಲ ರವರು ಉಪಸ್ಥಿತರಿರುವರು.
ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಮಾಜದ ಸಾಧಕರನ್ನು ಈ ಸಂದರ್ಭದಲ್ಲಿ ಗೌರವಿಸಿ ಸನ್ಮಾನಿಸಲಾಗುವುದು. ಅಪರಾಹ್ನ ಗಂಟೆ 2:00 ರಿಂದ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಗಜಾನನ ನಾಟ್ಯಾಂಜಲಿ ಸುಜಾತ ಕಲಾ ಕ್ಷೇತ್ರ ಮುಳ್ಳೇರಿಯ ಇವರಶಿಷ್ಯವೃಂದ ದವರಿಂದ ನೃತ್ಯ ಶಿಲ್ಪಂ ಎಂಬ ವಿನೂತನ ಶೈಲಿಯಪ್ರದರ್ಶನವಾಗಲಿರುವುದು. ಬೂಡು ಶ್ರೀ ಭಗವತಿ ಕ್ಷೇತ್ರದ ಮಹದ್ವಾರದ ಬಳಿಯಿಂದ ಗಾಣಿಗ ಸಮ್ಮಿಲನದ ಜಾಥಾವು ಬೆಳಗ್ಗೆ ಹೊರಡಲಿರುವುದು ಎಂದು ಅಧ್ಯಕ್ಷ ಚಂದ್ರಶೇಖರ ರವರು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಸ್ವಾಗತ ಸಮಿತಿ ಸಂಚಾಲಕ ಶಂಕರಪಾಟಾಳಿ ಪರಿವಾರಕಾನ, ಆರ್ಥಿಕ ಸಮಿತಿ ಸಂಚಾಲಕ ಚಂದ್ರಶೇಖರ ಪನ್ನೆ, ಆಂತರಿಕ ಲೆಕ್ಕ ಪರಿಶೋಧಕ ಮಹಾಲಿಂಗನ್ ಬಾಜರ್ತೊಟ್ಟಿ, ಕಾರ್ಯದರ್ಶಿ ಸುರೇಶ್ ಕರ್ಲಪ್ಪಾಡಿ, ಖಜಾಂಜಿ ಗೋಪಾಲಕೃಷ್ಣ ಮೊರಂಗಲ್ಲು, ಮಹಿಳಾ ಘಟಕದ ಸದಸ್ಯೆ ಪ್ರೇಮ ಕುಡೆಕಲ್ಲು, ಸಮಿತಿ ಸಂಚಾಲಕ ಪ್ರವೀಣ್ ಜಯನಗರ, ಕೇಶವ ಮೊರಂಗಲ್ಲು, ನಿರ್ದೇಶಕ ರಾಧಾಕೃಷ್ಣ ಬೇರ್ಪಡ್ಕ ಉಪಸ್ಥಿತರಿದ್ದರು.