ಕನಕಮಜಲು: ನಾಯಿಗಳಿಗೆ ರೋಗನಿರೋಧಕ ಲಸಿಕೆ ಅಭಿಯಾನ

0

ಕನಕಮಜಲು ಗ್ರಾಮ ವ್ಯಾಪ್ತಿಯಲ್ಲಿ ನಾಯಿಗಳಿಗೆ ರೋಗನಿರೋಧಕ ಲಸಿಕೆ ಅಭಿಯಾನ ಕಾರ್ಯಕ್ರಮವು ಸೆ.14ರಂದು ನಡೆಯಿತು.


ಕನಕಮಜಲು ಯುವಕ ಮಂಡಲದ ಸಹಯೋಗದಲ್ಲಿ ಗ್ರಾಮ ಪಂಚಾಯತಿ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸುಳ್ಯದ ಪಶು ವೈದ್ಯಾಧಿಕಾರಿ ಡಾ. ಪುಷ್ಪರಾಜ್ ಶೆಟ್ಟಿ ಹಾಗೂ ಪಶು ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದು, ನಾಯಿಗಳಿಗೆ ಹುಚ್ಚುನಾಯಿ ರೋಗನಿರೋಧಕ ಲಸಿಕೆ ನೀಡಿದರು.


ಈ ಸಂದರ್ಭದಲ್ಲಿ ಗ್ರಾ.ಪಂ‌. ಅಧ್ಯಕ್ಷೆ ಶ್ರೀಮತಿ ಶಾರದಾ ಉಗ್ಗಮೂಲೆ, ಉಪಾಧ್ಯಕ್ಷ ರವಿಚಂದ್ರ ಕಾಪಿಲ, ಗ್ರಾ.ಪಂ. ಮಾಜಿ ಅಧ್ಯಕ್ಷ ಶ್ರೀಧರ ಕುತ್ಯಾಳ, ಯುವಕ ಮಂಡಲದ ಅಧ್ಯಕ್ಷ ರಕ್ಷಿತ್ ಅಕ್ಕಿಮಲೆ, ಕಾರ್ಯದರ್ಶಿ ಸ್ವಸ್ತಿಕ್ ಕುತ್ಯಾಳ, ಕನಕಮಜಲು ಗ್ರಾಮದ ಪಶುಸಖಿ ಪೂರ್ಣಿಮಾ ಮಾಣಿಕೋಡಿ ಸೇರಿದಂತೆ ಗ್ರಾಮ ಪಂಚಾಯತಿ ಸಿಬ್ಬಂದಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.