ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾ ವಿದ್ಯಾಲಯದಲ್ಲಿ ಬೃಹತ್ ರಕ್ತದಾನ ಶಿಬಿರ

0

62 ಯುನಿಟ್ ಬ್ಲಡ್ ದಾನಿಗಳಿಂದ ಸಂಗ್ರಹ

ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯ,
ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾ ವಿದ್ಯಾಲಯ, ಆಂತರಿಕ ಗುಣಮಟ್ಟ ಭರವಸಕೋಶ, ಇದರ ವತಿಯಿಂದ ರಾಷ್ಟ್ರೀಯ ಸೇವಾ ಯೋಜನೆ ಘಟಕ, ಭಾರತ್ ರೋವರ್ಸ್ ಮತ್ತು ರೇಂಜರ್ಸ್ ಘಟಕ, ಯುವ ರೆಡ್ ಕ್ರಾಸ್ ಘಟಕ, ಕುಕ್ಕೆ ಶ್ರೀ ಆಟೋ ಚಾಲಕ ಮಾಲಕರ ಸಂಘ ಇದರ ಸಹಯೋಗದಲ್ಲಿ ಎ ಜೆ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ಬ್ಲಡ್ ಬ್ಯಾಂಕ್ ಮಂಗಳೂರು ಇವರ ಸಹಕಾರದಲ್ಲಿ ಸೆ.15 ಬೃಹತ್ ರಕ್ತದಾನ ಶಿಬಿರವನ್ನು ಏರ್ಪಡಿಸಲಾಯಿತು.

ಈ ಕಾರ್ಯಕ್ರಮದ ಉದ್ಘಾಟನೆಯನ್ನು ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯ ಇದರ ಅಧ್ಯಕ್ಷ ರಾಮಚಂದ್ರ ಪಳಂಗಾಯ ಮಾಡಿದರು. ಮಹಾವಿದ್ಯಾಲಯದ ಪ್ರಭಾರ ಪ್ರಾಂಶುಪಾಲರಾದ ದಿನೇಶ್ ಕೆ ಶಿಬಿರವನ್ನು ಉದ್ಘಾಟಿಸಿದರು.

ಮಹಾವಿದ್ಯಾಲಯದ ಆಂತರಿಕ ಗುಣಮಟ್ಟ ಭರವಸಾಕೋಶದ ಸಂಯೋಜಕರಾದ ಶ್ರೀಮತಿ ಲತಾ ಬಿ.ಟಿ , ಎ.ಜೆ ಬ್ಲಡ್ ಬ್ಯಾಂಕ್ ತಾಂತ್ರಿಕ ಅಧಿಕಾರಿ ಪಿ ಆರ್ ಗೋಪಾಲಕೃಷ್ಣ, ಕುಕ್ಕೆ ಶ್ರೀ ಆಟೋ ಚಾಲಕ ಮಾಲಕರ ಸಂಘ ಸುಬ್ರಹ್ಮಣ್ಯದ ಅಧ್ಯಕ್ಷ ವಿವೇಕಾನಂದ ದೇವರಗದ್ದೆ ಮುಖ್ಯ ಅತಿಥಿಗಳಾಗಿ ಭಾಗವಹಿಸಿದರು. ಲಯನ್ಸ್ ಕ್ಲಬ್ ನ ಸ್ಥಾಪಕ ಅಧ್ಯಕ್ಷರಾದ ಲಯನ್ ಪ್ರೊಫೆಸರ್‌ ರಂಗಯ್ಯ ಶೆಟ್ಟಿಗಾರ್ , ಲಯನ್ಸ್ ಕ್ಲಬ್ ನ ಖಜಾಂಜಿ ಚಂದ್ರಶೇಖರ್ ಪಾನತ್ತಿಲ ,ರೇಂಜರ್ಸ್ ಲೀಡರ್ ಶ್ರೀಮತಿ ಪ್ರಮೀಳಾ, ಯೂತ್ ರೆಡ್ ಕ್ರಾಸ್ ಘಟಕದ ಸಂಯೋಜಕರಾದ ಸಂಯೋಜಕರಾದ ಸೃಜನ್ ಮುಂಡೋಡಿವೇದಿಕೆಯಲ್ಲಿ ಉಪಸ್ಥಿತರಿದ್ದರು. ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನಾಧಿಕಾರಿಗಳಾದ ಶ್ರೀಮತಿ ಆರತಿ ಕೆ ಸ್ವಾಗತಿಸಿದರು. ಲಯನ್ಸ್ ಕ್ಲಬ್ಬಿನ ಕಾರ್ಯದರ್ಶಿಗಳಾದ ಸತೀಶ್ ಕೂಜುಗೋಡು ಇವರು ಧನ್ಯವಾದ ಅರ್ಪಿಸಿದರು.

ವಿದ್ಯಾರ್ಥಿನಿ ಕಲ್ಪನಾ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಒಟ್ಟು 62 ಯುನಿಟ್ ಬ್ಲಡ್ ಅನ್ನು ರಕ್ತದಾನಿಗಳಿಂದ ಸಂಗ್ರಹಿಸಲಾಯಿತು.