ಸುಳ್ಯ ದಸರಾ ಉತ್ಸವ ಸಮಿತಿ ಹಾಗೂ ಶಾರದಾಂಬ ಸೇವಾ ಸಮಿತಿಯ ವತಿಯಿಂದ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ

0

ಸುಳ್ಯ ದಸರಾ ಉತ್ಸವಕ್ಕೆ ರಾಜ್ಯ ಸರ್ಕಾರದಿಂದ ಅನುದಾನಕ್ಕೆ ಬೇಡಿಕೆ

ಸುಳ್ಯದ ಶ್ರೀ ಶಾರದಾಂಬ ಸೇವಾ ಸಮಿತಿ ಹಾಗೂ ದಸರಾ ಉತ್ಸವ ಸಮಿತಿಯ ವತಿಯಿಂದ ಶಾಸಕಿ ಭಾಗೀರಥಿ ಮುರುಳ್ಯ ಅವರನ್ನು ಸೆ.15ರಂದು ಸುಳ್ಯದ ನಿರೀಕ್ಷಣಾ ಮಂದಿರದಲ್ಲಿ ಭೇಟಿಯಾಗಿ ರಾಜ್ಯ ಸರ್ಕಾರದ ವತಿಯಿಂದ ಅನುದಾನ ಕೊಡಿಸುವಂತೆ ಬೇಡಿಕೆ ಸಲ್ಲಿಸಿದರು.

ಸುಳ್ಯ ದಸರಾ ಉತ್ಸವ ನಡೆಸುವ ಕುರಿತು, ಸ್ಥಬ್ದಚಿತ್ರ ನಿರ್ಮಿಸುವ ಕುರಿತು ಈ ವೇಳೆ ಶಾಸಕರೊಂದಿಗೆ ಚರ್ಚಿಸಲಾಯಿತು.

ಈ ಶಾಸಕಿ ಭಾಗೀರಥಿ ಮುರುಳ್ಯ ಅವರನ್ನು ಶಾರದಾಂಬ ಸೇವಾ ಸಮಿತಿಯ ವತಿಯಿಂದ ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಶ್ರೀ ಶಾರದಾಂಬ ಸೇವಾ ಸಮಿತಿಯ ಅಧ್ಯಕ್ಷ ಚಿದಾನಂದ ವಿದ್ಯಾನಗರ, ಪ್ರಧಾನ ಕಾರ್ಯದರ್ಶಿ ರವಿಚಂದ್ರ ಕೊಡಿಯಾಲಬೈಲು, ಖಜಾಂಜಿ ಪುರುಷೋತ್ತಮ ನಾವೂರು , ದಸರಾ ಸೇವಾ ಟ್ರಸ್ಟ್ ಉಪಾಧ್ಯಕ್ಷ ಬೂಡು ರಾಧಾಕೃಷ್ಣ ರೈ, ಸಮಿತಿ ಉಪಾಧ್ಯಕ್ಷ ಕೃಷ್ಣ ಬೆಟ್ಟ, ಕುಸುಮಾಧರ ರೈ ಕೇರ್ಪಳ, ತೀರ್ಥರಾಮ ಜಾಲ್ಸೂರು ಸೇರಿದಂತೆ ಸಮಿತಿಯ ವಿವಿಧ ಪದಾಧಿಕಾರಿಗಳು ಉಪಸ್ಥಿತರಿದ್ದರು.