ಎನ್ನೆಂಸಿಯಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಸಂವಿಧಾನ ಪೀಠಿಕೆ ವಾಚನ ಕಾರ್ಯಕ್ರಮ

0


ನೆಹರು ಮೆಮೋರಿಯಲ್ ಕಾಲೇಜು ಸುಳ್ಯ ಇದರ ರಾಜ್ಯಶಾಸ್ತ್ರ ವಿಭಾಗ ಮತ್ತು ಆಂತರಿಕ ಗುಣಮಟ್ಟ ಖಾತರಿ ಕೋಶ ಜಂಟಿ ಆಶ್ರಯದಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಸಂವಿಧಾನ ಪೀಠಿಕೆ ವಾಚನ ಕಾರ್‍ಯಕ್ರಮವನ್ನು ಆಯೋಜಿಸಲಾಗಿತ್ತು.

ಕಾರ್‍ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ ಪ್ರೊ. ರುದ್ರಕುಮಾರ್ ಎಂ.ಎಂ ವಹಿಸಿದ್ದರು. ಸಂವಿಧಾನದ ಪೀಠಿಕೆಯ ಮಹತ್ವ, ಅದರ ಆಶಯ ಮತ್ತು ಮೂಲ ತತ್ವಗಳ ಬಗ್ಗೆ ಡಾ. ಮಮತಾ ಕೆ ಮುಖ್ಯಸ್ಥರು ರಾಜ್ಯಶಾಸ್ತ್ರ ವಿಭಾಗ ಇವರು ಉಪನ್ಯಾಸವನ್ನು ನೀಡಿದರು. ವಿದ್ಯಾರ್ಥಿ ಕ್ಷೇiಪಾಲನಾ ಅಧಿಕಾರಿಗಳಾದ ಶ್ರೀಮತಿ ರತ್ನಾವತಿ.ಡಿ ಮತ್ತು ಇತಿಹಾಸ ವಿಭಾಗದ ಮುಖ್ಯಸ್ಥರಾದ ಶ್ರೀಯುತ ತಿಪ್ಪೇಸ್ವಾಮಿ ಡಿ.ಹೆಚ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಉಪನ್ಯಾಸಕರಾದ ಶ್ರೀಯುತ ಶ್ರೀಧರ.ವಿ, ವಿಷ್ಣು ಪ್ರಶಾಂತ್ ಬಿ, ಹರಿಪ್ರಸಾದ್ ಹೆಚ್ ವಿ ಕಾರ್‍ಯಕ್ರಮಕ್ಕೆ ಸಹಕರಿಸಿದರು. ಕಾಲೇಜಿನ ಉಪನ್ಯಾಸಕ ವರ್ಗ, ಉಪನ್ಯಾಸಕೇತರ ವರ್ಗ ಮತ್ತು ವಿದ್ಯಾರ್ಥಿಗಳು ಕಾರ್‍ಯಕ್ರಮದಲ್ಲಿ ಉಪಸ್ಥಿತರಿದ್ದು ಸಂವಿಧಾನದ ಪೀಠಿಕೆಯನ್ನು ವಾಚನ ಮಾಡಿದರು.