ಇಂದು ಬೆಳ್ಳಾರೆಯಲ್ಲಿ ಯಾದವ ಸಭಾ ಪ್ರಾದೇಶಿಕ ಸಮಿತಿ ವತಿಯಿಂದ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಪ್ರತಿಭಾ ಪುರಸ್ಕಾರ

0

ಯಾದವ ಸಭಾ ಕೇಂದ್ರ ಸಮಿತಿ ಮಂಗಳೂರು ಇದರ ಬೆಳ್ಳಾರೆ ಪ್ರಾದೇಶಿಕ ಸಮಿತಿಯ ವತಿಯಿಂದ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಸೆ.17ರಂದು ಬೆಳ್ಳಾರೆಯ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ ನಡೆಯಲಿದೆ.
ಬೆಳಿಗ್ಗೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಬೆಳ್ಳಾರೆ ಪ್ರಾದೇಶಿಕ ಸಮಿತಿ ಅಧ್ಯಕ್ಷ ಆನಂದ ಉಮಿಕ್ಕಳ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಯಾದವ ಸಭಾ ಕೇಂದ್ರ ಸಮಿತಿ ಅಧ್ಯಕ್ಷ ಎ.ಕೆ. ಮಣಿಯಾಣಿ, ಕೇಂದ್ರ ಸಮಿತಿ ಉಪಾಧ್ಯಕ್ಷ ವಿ.ವಿ. ಬಾಲನ್, ಸುಳ್ಯ ತಾಲೂಕು ಸಮಿತಿ ಅಧ್ಯಕ್ಷ ಕರುಣಾಕರ ಹಾಸ್ಪಾರೆ, ಮಹಿಳಾ ವೇದಿಕೆ ಅಧ್ಯಕ್ಷೆ ಶ್ರೀಮತಿ ರಾಜೀವಿ ಪರ್ಲಿಕಜೆ, ತಾಲೂಕು ಸಮಿತಿ ಕಾರ್ಯದರ್ಶಿ ಕೃಷ್ಣ ಬೆಟ್ಟ ಉಪಸ್ಥಿತರಿರಲಿದ್ದಾರೆ.
ಈ ಸಂದರ್ಭದಲ್ಲಿ 2022-23ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ. ಪಿಯುಸಿ ಮತ್ತು ಪದವಿಯಲ್ಲಿ ಉತ್ತೀರ್ಣರಾದ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನಡೆಯಲಿದೆ.