ಗೂನಡ್ಕ ಶ್ರೀ ಶಾರದಾ ಅನುದಾನಿತ ಹಿ.ಪ್ರಾ.ಶಾಲೆಯಲ್ಲಿ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಹನುಮಂತಪ್ಪ ಅವರಿಗೆ ಅಭಿನಂದನಾ ಕಾರ್ಯಕ್ರಮ

0

ದಕ್ಷಿಣ ಕನ್ನಡ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಾದ ಸಂಪಾಜೆ ಗ್ರಾಮದ ಗೂನಡ್ಕ ಶ್ರೀ ಶಾರದಾ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರಾದ ಹನುಮಂತಪ್ಪ ಅವರಿಗೆ ಶಾಲಾಭಿವೃದ್ಧಿ ಸಮಿತಿ ವತಿಯಿಂದ ಅಭಿನಂದನಾ ಸಮಾರಂಭವು ಶಾಲಾ ಸಭಾಂಗಣದಲ್ಲಿ ಸೆ.16ರಂದು ಬೆಳಿಗ್ಗೆ ನಡೆಯಿತು.

ಗೂನಡ್ಕ ಶ್ರೀ ಶಾರದಾ ವಿದ್ಯಾಸಂಘದ ಅಧ್ಯಕ್ಷ ಜಿ. ರಾಮಚಂದ್ರ ಕಲ್ಲುಗದ್ದೆ ಅಧ್ಯಕ್ಷತೆ ವಹಿಸಿದ್ದರು. ಶ್ರೀ ಶಾರದಾ ವಿದ್ಯಾಸಂಘದ ಸಂಚಾಲಕ ಎಸ್.ಪಿ. ಲೋಕನಾಥ್ , ಅರಂತೋಡು ಕ್ಲಸ್ಟರ್ ಸಿ.ಆರ್.ಪಿ. ಶ್ರೀಮತಿ ಮಮತ , ಸಂಪಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸೋಮಶೇಖರ್ ಕೊಯಿಂಗಾಜೆ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಉಮ್ಮರ್ ಬೀಜದಕಟ್ಟೆ, ಸಂಪಾಜೆ ವರ್ತಕರ ಸಂಘದ ಅಧ್ಯಕ್ಷ ಯು
ಬಿ. ಚಕ್ರಪಾಣಿ, , ಮಹಮ್ಮದ್ ಕುಂಞಿ ಗೂನಡ್ಕ, ಶಾಲಾ ಎಸ್.ಡಿ.ಎಂ. ಅಧ್ಯಕ್ಷ ಸಿದ್ದೀಕ್ ಗೂನಡ್ಕ, ಎಸ್.ಡಿ.ಎಂ.ಸಿ. ಉಪಾಧ್ಯಕ್ಷೆ ಶ್ರೀಮತಿ ಆಶಾ ವಿನಯಕುಮಾರ್, ಕೆ.ಪಿ.ಜಗದೀಶ್, ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು.

ನಿವೃತ್ತ ಮುಖ್ಯೋಪಾಧ್ಯಾಯ ದಾಮೋದರ ಮಾಸ್ತರ್ ಕೆ. ಹಾಗೂ ನಿವೃತ್ತ ಮುಖ್ಯೋಪಾಧ್ಯಾಯ ಚಿದಾನಂದ ಯು.ಎಸ್. ಅವರು ಪ್ರಶಸ್ತಿ ಪುರಸ್ಕೃತ ಶಿಕ್ಷಕರಾದ ಹನುಮಂತಪ್ಪ ಅವರ ಕುರಿತು ಅಭಿನಂದನಾ ಭಾಷಣ ಮಾಡಿದರು. ಸಭೆಯಲ್ಲಿ ಅಲ್ ಅಮೀನ್ ಅಧ್ಯಕ್ಷ ಸಾದಿಕ್ ಗೂನಡ್ಕ, ಜಯಲಕ್ಷ್ಮಿ, ಚಿತ್ರ ಪೇರಡ್ಕ, ಸಂಪಾಜೆ ಗ್ರಾ.ಪಂ.ಸದಸ್ಯರುಗಳಾದ ಅಬೂಸಾಲಿ , ಶೌವಾದ್ ಗೂನಡ್ಕ, ಅಬ್ದುಲ್ಲ ಕೊಪ್ಪದಕಜೆ, ವರದರಾಜ್ ಸಂಕೇಶ ಗೂನಡ್ಕ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.