ಆದಿದ್ರಾವಿಡ ಸಮ್ಮಿಲನ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

0

ಆದಿದ್ರಾವಿಡ ಯುವ ವೇದಿಕೆ ದ. ಕ ಹಾಗೂ ಸುಳ್ಯ ತಾಲೂಕು ಸಮಿತಿ ಹಾಗೂ ತಾಲೂಕು ಮಹಿಳಾ ಸಮಿತಿ ಮತ್ತು ಗ್ರಾಮ ಘಟಕ ಸಮಿತಿಗಳ ನೇತೃತ್ವದಲ್ಲಿ ಆದಿದ್ರಾವಿಡ ಸಮ್ಮಿಲನ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಸುಳ್ಯದ ಗಾಂಧಿನಗರ ನಾವೂರು ಶ್ರೀ ಮಹಮ್ಮಾಯಿ ದೇವಸ್ಥಾನದಲ್ಲಿ ಮಹಮ್ಮಾಯಿ ದೇವಸ್ಥಾನದ ಆಡಳಿತ ಸಮಿತಿಯ ಸಮ್ಮುಖದಲ್ಲಿ ನಡೆಯಿತು. ಅ.29 ರಂದು ಸುಳ್ಯದ ಐವರ್ನಾಡಿನ ಸರಕಾರಿ ಪದವಿ ಪೂರ್ವ ಕಾಲೇಜ್ ನಲ್ಲಿ ಗ್ರಾಮೀಣ ಕ್ರೀಡಾಕೂಟ ಹಾಗೂ ನ.05 ರಂದು ಸುಳ್ಯ ಕೆವಿಜಿ ಪುರಭವನದಲ್ಲಿ ಆದಿದ್ರಾವಿಡ ಸಮ್ಮಿಲನ ಕಾರ್ಯಕ್ರಮದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.