ಸುಳ್ಯ 110 ಕೆ.ವಿ. ವಿದ್ಯುತ್ ಸಬ್ ಸ್ಟೇಷನ್ ಕಾಮಗಾರಿ ತಕ್ಷಣ ಪ್ರಾರಂಭಿಸದಿದ್ದರೆ ಪ್ರತಿಭಟನೆ : ಸುಳ್ಯ ಬಿಜೆಪಿ

0

ಹಿಂದಿನ ಬಿಜೆಪಿ ಸರ್ಕಾರ ಇರುವಾಗ ಮಾಜಿ ಸಚಿವ ಮಾನ್ಯ ಎಸ್.ಅಂಗಾರರ ಸತತ ಪ್ರಯತ್ನ, ಮಾಜಿ ಸಚಿವರಾದ ಸುನಿಲ್ ಕುಮಾರ್ ಕಾರ್ಕಳ ಅವರ ಸಹಕಾರದ ಮುಖಾಂತರವಾಗಿ ಸುಳ್ಯಕ್ಕೆ ಬಹುಬೇಡಿಕೆಯ 110 ಕೆ.ವಿ ವಿದ್ಯುತ್ ಸಬ್ ಸ್ಟೇಷನ್ ಮಂಜೂರಾಗಿ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿತ್ತು. ಆದರೆ ಇದೀಗ ಬಂದ ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರ ಈ ಕಾಮಗಾರಿಯನ್ನು ತಡೆಹಿಡಿದಿದೆ. ಮುಂದಿನ ಒಂದು ವಾರದೊಳಗಾಗಿ ಕಾಮಗಾರಿಯನ್ನು ಪ್ರಾರಂಭಿಸಬೇಕು. ಇಲ್ಲದಿದ್ದ ಪಕ್ಷದಲ್ಲಿ ರಾಜ್ಯದ ಕಾಂಗ್ರೆಸ್ ಸರ್ಕಾರ ಮತ್ತು ಕೆ.ಪಿ.ಟಿ.ಸಿ.ಎಲ್ ಉನ್ನತ ಅಧಿಕಾರಿಗಳ ವಿರುದ್ಧ ಸುಳ್ಯದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದುಸುಳ್ಯ ಮಂಡಲ ಬಿ.ಜೆ.ಪಿ. ಅಧ್ಯಕ್ಷ ಹರೀಶ್ ಕಂಜಿಪಿಲಿ, ಪ್ರಧಾನ ಕಾರ್ಯದರ್ಶಿಗಳಾದ ಸುಭೋದ್ ಶೆಟ್ಟಿ ಮೇನಾಲ ಹಾಗೂ ರಾಕೇಶ್ ರೈ ಕೆಡೆಂಜಿ ತಿಳಿಸಿದ್ದಾರೆ.