ಸಂಪಾಜೆ ಸಾರ್ವಜನಿಕ ಶ್ರೀ ದೇವತಾರಾಧನಾ ಸಮಿತಿ ವತಿಯಿಂದ 30ನೇ ವರ್ಷದ ಗೌರಿ ಗಣೇಶೋತ್ಸವ

0

ಸಾರ್ವಜನಿಕ ಶ್ರೀ ದೇವತಾರಾಧನಾ ಸಮಿತಿ ವತಿಯಿಂದ 30ನೇ ವರ್ಷದ ಗೌರಿ ಗಣೇಶೋತ್ಸವ ಸೆ.18ರಂದು ನಡೆಯಿತು. ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ವಿವಿಧ ಆಟೋಟ ಸ್ಪರ್ಧೆಗಳು, ಕೆಸರುಗದ್ದೆ, ಹಗ್ಗ ಜಗ್ಗಾಟ ಕಾರ್ಯಕ್ರಮಗಳು ನಡೆಯಿತು.

ಸಂಜೆ ವಿಠಲ್ ನಾಯಕ್ ಕಲ್ಲಡ್ಕ ಅವರಿಂದ ಸಾಹಿತ್ಯ ಸಂಭ್ರಮ ವೈಭವ ಕಾರ್ಯಕ್ರಮ ನಡೆಯಿತು. ನಂತರ ಭಜನಾ ಕಾರ್ಯಕ್ರಮ ಭರತನಾಟ್ಯ ಹಾಗೂ ರಂಗಮಯೂರಿ ಕಲಾಶಾಲೆ ವತಿಯಿಂದ ಸಂಸ್ಕೃತಿಕ ವೈಭವವು ನಡೆಯಿತು. ನಂತರ ಶ್ರೀ ದೇವರಿಗೆ ಮಹಾಪೂಜೆ ಪ್ರಸಾದ ವಿತರಣೆ ನಡಯಿತು.ಈ ಸಂಧರ್ಭದಲ್ಲಿ ದೇವತಾರಾಧನಾ ಸಮಿತಿಯ ಅಧ್ಯಕ್ಷರು ಪದಾಧಿಕಾರಿಗಳು ಶ್ರೀ ಪಂಚಲಿಂಗೇಶ್ವರ ದೇವಲಯದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಸಂಪಾಜೆ ಬಯಲಿನ ವಿವಿಧ ಸಂಘ ಸಂಸ್ಥೆಯ ಪದಾಧಿಕಾರಿಗಳು ಉಪಸ್ಥಿತರಿದ್ದು ಕಾರ್ಯಕ್ರಮ ವೀಕ್ಷಣೆಗೆ ಹೆಚ್ಚಿನ ಭಕ್ತರು ಆಗಮಿಸಿದ್ದರು.