ಅರಂಬೂರು ಮೂಕಾಂಬಿಕಾ ಭಜನಾ ಮಂದಿರದಲ್ಲಿ 37 ನೇ ವರ್ಷದ ಸಂಭ್ರಮದ ಗಣೇಶೋತ್ಸವ

0

ಅರಂಬೂರು ಶ್ರೀ ಮೂಕಾಂಬಿಕಾ ಭಜನಾ ಮಂದಿರದಲ್ಲಿ 37ನೇ ವರ್ಷದ ಶ್ರೀ ಗಣೇಶೋತ್ಸವ ವು ಸೆ. 19 ರಂದು ವಿಜ್ರಂಭಣೆಯಿಂದ ಜರುಗಿತು.
ಬೆಳಗ್ಗೆ ಶ್ರೀ ಕೃಷ್ಣ ನಗರದಿಂದ ವಾದ್ಯಘೋಷಗಳೊಂದಿಗೆ ಭಜನಾ ಮಂದಿರದ ಸನ್ನಿಧಿಗೆ ಶ್ರೀ ಗಣೇಶ ಮೂರ್ತಿಯ ಮೆರವಣಿಗೆಯೂ ಸಾಗಿ ಬಂದು ಅರ್ಚಕರ ನೇತೃತ್ವದಲ್ಲಿ ಗಣಪತಿ ಹವನವಾಗಿ ಗಣೇಶ ಮೂರ್ತಿಯ ಪ್ರತಿಷ್ಠೆಯು ನೆರವೇರಿತು.

ಬೆಳಗ್ಗೆ ಪೂಜೆಯು ನಡೆದ ಬಳಿಕ ಸ್ಥಳೀಯ ಭಜಕರಿಂದ ಭಜನಾ ಕಾರ್ಯಕ್ರಮವು ನಡೆಯಿತು. ಮಧ್ಯಾಹ್ನ ಮಹಾಪೂಜೆಯಾಗಿ ಸಾರ್ವಜನಿಕ ಅನ್ನ ಸಂತರ್ಪಣೆಯಾಯಿತು. ಸಂಜೆ ಸ್ಥಳೀಯ ಕಲಾವಿದರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ರಾತ್ರಿ ಸಭಾ ಕಾರ್ಯಕ್ರಮದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಆಟೋಟ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಣಾ ಕಾರ್ಯಕ್ರಮ ನಡೆಯಿತು. ರಾತ್ರಿ ಮಹಾಪೂಜೆಯಾಗಿ ಪ್ರಸಾದ ವಿತರಣೆಯಾಯಿತು.

ಬಳಿಕ ಶ್ರೀ ಗಣೇಶನ ವೈಭವದ ಶೋಭಯಾತ್ರೆಯು ಚೆಂಡೆ ವಾದ್ಯ ಘೋಷ ಸಿಡಿ ಮದ್ದಿನ ಪ್ರದರ್ಶನ ದಿಂದಿಗೆ ಹಾಗೂ ವಿಶೇಷವಾಗಿ ಆಕರ್ಷಕ ಕುಣಿತ ಭಜನೆಯೊಂದಿಗೆ ಮುಖ್ಯರಸ್ತೆಯಲ್ಲಿ ಸಾಗಿ ಬಂದು ಪಯಸ್ವಿನಿ ನದಿಯಲ್ಲಿ ಜಲಸ್ತಂಭನಗೊಂಡಿತು.