ದೊಡ್ಡತೋಟ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಮಾಸಾಚರಣೆ

0

ದೊಡ್ಡತೋಟ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಮಾಸಾಚರಣೆ ಯನ್ನು ನಡೆಸಲಾಯಿತು.

ಈ ಕಾರ್ಯಕ್ರಮದಲ್ಲಿ ಬಾಲವಿಕಾಸನ ಸಮಿತಿ ಅಧ್ಯಕ್ಷೆ ಶ್ರೀಮತಿ ಗಾಯತ್ರಿ ಶ್ರೀಹರಿ ಅಧ್ಯಕ್ಷತೆ ವಹಿಸಿದ್ದರು.

ಅಮರ ಮುಡ್ನೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಜಾನಕಿ ರಮೇಶ್ ರವರು ಕಾರ್ಯಕ್ರಮ ಉದ್ಘಾಟನೆ ಮಾಡಿದರು. ಗ್ರಾ.ಪಂ.ಮಾಜಿ ಅಧ್ಯಕ್ಷೆ ಪದ್ಮಪ್ರಿಯಾ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ದೊಡ್ಡತೋಟ ವಲಯದ ಮೇಲ್ವಿಚಾರಕರಾದ ಕೃಷ್ಣಪ್ಪ ಕುಲಾಲ್ , ಶ್ರೀಮತಿ
ಶೀಲಾವತಿ ಸ.ಉ.ಹಿ.ಪ್ರಾ.ಶಾಲೆಯ ಮುಖ್ಯ ಗುರುಗಳು, ಶ್ರೀಮತಿ ಲಲಿತಾ ಪ್ರಾ. ಆರೋಗ್ಯ ಸುರಕ್ಷಾಧಿಕಾರಿಗಳು, ಶಿಲ್ಪಾ ಸಮುದಾಯ ಆರೋಗ್ಯ ಅಧಿಕಾರಿಗಳು, ಮತ್ತು ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

ಶ್ರೀಮತಿ ಭಾಗ್ಯಶ್ರೀ ಪ್ರಾರ್ಥನೆ ಮಾಡಿದರು. ಮೋಹಿನಿ ಕಾರ್ಯಕ್ರಮ ನಿರೂಪಣೆ ಮಾಡಿದರು. ಶ್ರೀಮತಿ ರೇಖಾ ಕೆ.ಎಸ್ ಸ್ವಾಗತಿಸಿ ಶ್ರೀಮತಿ ರಾಜೇಶ್ವರಿ ಯಂ.ಅಂಗನವಾಡಿ ಕಾರ್ಯಕರ್ತೆ ಧನ್ಯವಾದ ಮಾಡಿದರು. ಅಂಗನವಾಡಿ ಸಹಾಯಕಿ ಕುಸುಮಾವತಿ ಕೆ.ವಿ, ಸ್ತ್ರೀ ಶಕ್ತಿ ಗುಂಪಿನ ಸದಸ್ಯೆಯರು,ತಾಯಂದಿರು ಸಹಕರಿಸಿದರು.ಸ್ತ್ರೀ ಶಕ್ತಿ ಸದಸ್ಯರು ಮತ್ತು ತಾಯಂದಿರು ತಯಾರಿಸಿದ ಪೌಷ್ಟಿಕ ಆಹಾರ ಗಳಿಗೆ ಬಹುಮಾನ ನೀಡಲಾಯಿತು. ಪೌಷ್ಟಿಕ ಆಹಾರ ತಯಾರಿಕೆ ಮತ್ತು ಆರೋಗ್ಯದ ಬಗ್ಗೆ ಮಾಹಿತಿ ನೀಡಲಾಯಿತು.