ನಾಣಿಲ ಹಿರಿಯ ಪ್ರಾಥಮಿಕ ಶಾಲೆಗೆ ಡಾ| ರೇಣುಕಾಪ್ರಸಾದ್ ರವರಿಂದ ಲ್ಯಾಪ್‌ಟಾಪ್ ಕೊಡುಗೆ

0

ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕರು, ಕೆ.ವಿ.ಜಿ. ಚಾರಿಟೇಬಲ್ ಟ್ರಸ್ಟ್‌ನ ಮ್ಯಾನೇಜಿಂಗ್ ಟ್ರಸ್ಟಿ ಡಾ| ರೇಣುಕಾಪ್ರಸಾದ್ ಕೆ.ವಿ. ಯವರು ಪುತ್ತೂರು ತಾಲೂಕು ಕಾಣಿಯೂರು ಗ್ರಾಮದ ನಾಣಿಲ ಹಿರಿಯ ಪ್ರಾಥಮಿಕ ಶಾಲೆಗೆ ಲ್ಯಾಪ್‌ಟಾಪ್‌ನ್ನು ಕೊಡುಗೆಯಾಗಿ ನೀಡಿದರು. ಶಾಲೆಯ ಪರವಾಗಿ ಸುಳ್ಯದ ನ್ಯಾಯವಾದಿ ವೆಂಕಪ್ಪಗೌಡರು ಲ್ಯಾಪ್‌ಟಾಪ್ ಪಡೆದುಕೊಂಡು ಶಾಲೆಯ ಶೈಕ್ಷಣಿಕ ಪ್ರಗತಿಯ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಕೆ.ವಿ.ಜಿ ಇಂಜಿನಿಯರಿಂಗ್ ಕಾಲೇಜಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ| ಉಜ್ವಲ್ ಊರುಬೈಲು ಉಪಸ್ಥಿತರಿದ್ದರು.

ದಿನಾಂಕ ೧೮.೦೯.೨೦೨೩ ರಂದುನಾಣಿಲ ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವೆಂಕಪ್ಪಗೌಡರು ಲ್ಯಾಪ್‌ಟಾಪ್‌ನ್ನು ಶಾಲಾ ಮುಖ್ಯ ಶಿಕ್ಷಕರಿ ಹಸ್ತಾಂತರಿಸಿದರು.