ಯುವಜನ ಸಂಯುಕ್ತ ಮಂಡಳಿಯ ಕ್ರಿಯಾಶೀಲ ನಿರ್ದೇಶಕರಾಗಿ ದಿನೇಶ್ ಹಾಲೆಮಜಲು

0

ಸುಳ್ಯ ಶಾಸಕಿ ಭಾಗಿರಥಿ ಮುರುಳ್ಯರವರಿಂದ ಗೌರವಾರ್ಪಣೆ

ನಾಲ್ಕೂರು ಗ್ರಾಮದ ಹಾಲೆಮಜಲಿನ ಆದರ್ಶ ಯೂತ್ ಕ್ಲಬ್ ನ ಗೌರವಾಧ್ಯಕ್ಷ ಹಾಗೂ ಸುಳ್ಯ ತಾಲೂಕು ಯುವಜನ ಸಂಯುಕ್ತ ಮಂಡಳಿಯ ನಿರ್ದೇಶಕ ದಿನೇಶ್ ಹಾಲೆಮಜಲು ಅವರನ್ನು ಯುವಜನ ಸಂಯುಕ್ತ ಮಂಡಳಿಯಲ್ಲಿ ತಾಲೂಕಿನಲ್ಲಿಯೇ ಅತ್ಯಂತ ಕ್ರಿಯಾಶೀಲ ನಿರ್ದೇಶಕರಾಗಿ ಕೆಲಸ ಮಾಡಿದಕ್ಕಾಗಿ ಸುಳ್ಯ ಶಾಸಕಿ ಕು. ಭಾಗಿರಥಿ ಮುರುಳ್ಯ ರವರು ಸೆ. 21 ರಂದು ಯುವಜನ ಸಂಯುಕ್ತ ಮಂಡಳಿಯಲ್ಲಿ ನಡೆದ ಮಹಾಸಭೆಯಲ್ಲಿ ಶಾಲು ಹೊದಿಸಿ ಸ್ಮರಣಿಕೆ ನೀಡಿ ಗೌರವಿಸಿದರು.

ದಿನೇಶ್ ಹಾಲೆಮಜಲುರವರು ಸುದ್ದಿ ಬಿಡುಗಡೆಯ ನಾಲ್ಕುರು ಗ್ರಾಮದ ಪ್ರತಿನಿಧಿಯಾಗಿಯೂ ಕೆಲಸ ನಿರ್ವಹಿಸುತ್ತಿದ್ದಾರೆ.