ಸುಳ್ಯ ಸರಸ್ವತಿ ಕ್ರೆಡಿಟ್ ಸೌಹಾರ್ದ ಸಂಘ 21ನೇ ವರ್ಷಕ್ಕೆ ಪಾದಾರ್ಪಣೆ ಪ್ರಯುಕ್ತ ಗ್ರಾಹಕ ದಿನ

0

ಶ್ರೀ ಸರಸ್ವತಿ ಕ್ರೆಡಿಟ್‌ ಸೌಹಾರ್ದ ಸಹಕಾರಿ ಸಂಘದ ಸುಳ್ಯ ಶಾಖೆಯು ಕಳೆದ 20 ವರ್ಷವನ್ನು ಪೂರೈಸಿ ಇದೀಗ 21ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ಸಂದರ್ಭದಲ್ಲಿ ಸೆ.22 ರಂದು ಗ್ರಾಹಕ ದಿನ ಆಚರಿಸಲಾಯಿತು.

ಬೆಳಗ್ಗೆ ಅರ್ಚಕರ ನೇತೃತ್ವದಲ್ಲಿ ಗಣಪತಿ ಹವನ ಹಾಗೂ ಲಕ್ಷ್ಮೀ ಪೂಜೆಯು ನಡೆಯಿತು. ಈ ಸಂದರ್ಭದಲ್ಲಿ
ಸಂಘದ ಅಧ್ಯಕ್ಷ ಎಸ್.ಆರ್.ಸತೀಶ್ಚಂದ್ರ , ಉಪಾಧ್ಯಕ್ಷ ಉಮೇಶ ಪ್ರಭು, ನಿರ್ದೇಶಕ ಹೇಮಂತ್ ಕುಮಾರ್ ಕಂದಡ್ಕ, ಮಾಜಿ ಉಪಾಧ್ಯಕ್ಷ ವಿನಯ್ ಕುಮಾರ್ ಕಂದಡ್ಕ , ಹಾಗೂ ಸಂಘದ ಸದಸ್ಯರು, ಗ್ರಾಹಕರು ಉಪಸ್ಥಿತರಿದ್ದರು.
ಅದೃಷ್ಟ ಗ್ರಾಹಕ ಕಾರ್ಯಕ್ರಮ ಅಯೋಜಿಸಲಾಗಿದ್ದು ರಘು ಸಿ .ಕೆ ಅದೃಷ್ಟ ಗ್ರಾಹಕರಾಗಿ ಆಯ್ಕೆಯಾದರು.