ಬೆಳ್ಳಾರೆ: ಜ್ಞಾನದೀಪದಲ್ಲಿ ಮೊಂಟೆಸ್ಸರಿ ಶಿಕ್ಷಕಿಯರ ತರಬೇತಿಯ ಪ್ರಮಾಣ ಪತ್ರ ವಿತರಣೆ,ಪ್ರತಿಭಾ ಪುರಸ್ಕಾರ

0


ಭಾರತ ಸರಕಾರದಿಂದ ಪ್ರವರ್ತಿತ ಅಭಿವೃದ್ಧಿ ಏಜನ್ಸಿಯಾದ ಭಾರತ್ ಸೇವಕ ಸಮಾಜದ ಅಂಗಿಕೃತ ಸಂಸ್ಥೆಯಾದ ಬೆಳ್ಳಾರೆಯ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯ 2022-23ನೇ ಸಾಲಿನ ಮೊಂಟೆಸ್ಸರಿ ಶಿಕ್ಷಕಿಯರ ತರಬೇತಿಯ ಪ್ರಮಾಣ ಪತ್ರ ವಿತರಣೆ, ಅತ್ಯಧಿಕ ಅಂಕಗಳೊಂದಿಗೆ ಉತ್ತೀರ್ಣರಾದ ವಿದ್ಯಾರ್ಥಿ ಶಿಕ್ಷಕಿಯರಿಗೆ ಅಕಾಡೆಮಿಕ್ ಎಕ್ಸಲೆನ್ಸ್ ಅವಾರ್ಡ್ ಪ್ರದಾನ ಕಾರ್ಯಕ್ರಮ ನಡೆಯಿತು.

ಭಾರತ್ ಸೇವಕ ಸಮಾಜದ ಕಾಸರಗೋಡು ಮತ್ತು ದ. ಕ ಜಿಲ್ಲಾ ಸಂಯೋಜಕ ರಘುಕುಮಾರ್ ಪ್ರಮಾಣ ಪತ್ರ ವಿತರಿಸಿ ಶುಭಹಾರೈಸಿದರು. 2022-23ನೇ ಸಾಲಿನ ಮೊಂಟೆಸ್ಸರಿ ಶಿಕ್ಷಕಿಯರ ತರಬೇತಿಯಲ್ಲಿ ಶೇ.85 ಕ್ಕೂ ಅಧಿಕ ಅಂಕ ಪಡೆದು ಉತ್ತೀರ್ಣರಾದ 8 ಮಂದಿ ವಿದ್ಯಾರ್ಥಿಗಳನ್ನು ಅವಾರ್ಡ್ ನೀಡಿ ಗೌರವಿಸಲಾಯಿತು. ಸಂಸ್ಥೆಯ ಹಿರಿಯ ಉಪನ್ಯಾಸಕ ಅಚ್ಚುತ ಅಟ್ಲುರು ಅಧ್ಯಕ್ಷತೆ ವಹಿಸಿದ್ದರು. ಉಪ್ಪಳದ ನ್ಯೂಭಾರತ್ ಕಾಲೇಜಿನ ಉಪನ್ಯಾಸಕಿ ಶಿಲ್ಪಾ, ಸಂಸ್ಥೆಯ ಉಪನ್ಯಾಸಕಿ ಗೀತಾ ಬಾಲಚಂದ್ರ ಉಸ್ಥಿತರಿದ್ದರು. ಸಂಸ್ಥೆಯ ನಿರ್ದೇಶಕ ಉಮೇಶ್ ಮಣಿಕ್ಕಾರ ಪ್ರಸ್ತಾವಿಸಿ, ಸ್ವಾಗತಿಸಿದರು. ಉಪನ್ಯಾಸಕ ಗಣೇಶ್ ನಾಯಕ್ ಕಾರ್ಯಕ್ರಮ ನಿರ್ವಹಿಸಿದರು.