ಮಂಗಳೂರಿನಲ್ಲಿ ಜಿಲ್ಲಾ ಜನತಾ ದರ್ಶನ ಕಾರ್ಯಕ್ರಮ

0

ಬೆಳ್ಳಾರೆ ಪ್ರಾಥಮಿಕ ಆರೋಗ್ಯ ಕೇಂದ್ರ ಮೇಲ್ದರ್ಜೆಗೇರಿಸಲು ಆರೋಗ್ಯ ಸಚಿವರಿಗೆ ಮನವಿ

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಶಯದಂತೆ ಇಂದು
ದಕ್ಷಿಣ ಕನ್ನಡ ಜಿಲ್ಲಾ ಜನತಾ ದರ್ಶನ ಕಾರ್ಯಕ್ರಮವು ದ.ಕ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರ ನೇತೃತ್ವದಲ್ಲಿ ಮಂಗಳೂರಿನ ಪುರಭವನದಲ್ಲಿ ನಡೆಯಿತು.


ಈ ಜನತಾ ದರ್ಶನದಲ್ಲಿ ಪೆರುವಾಜೆ ಗ್ರಾಮ ಪಂಚಾಯತ್ ಸದಸ್ಯ ಸಚಿನ್ ರಾಜ್ ಶೆಟ್ಟಿ ಭಾಗವಹಿಸಿ ಪೆರುವಾಜೆ ಗ್ರಾಮಕ್ಕೆ ಗ್ರಾಮ ಸಹಾಯಕ, ಬೆಳ್ಳಾರೆ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರ ವನ್ನು ಮೇಲ್ದರ್ಜೆ ಗೆ ಏರಿಸುವಂತೆ, ಸುಳ್ಯ ಇಂದಿರಾ ಕ್ಯಾಂಟಿನ್ ಗೆ ತಾಲೂಕು ಕಚೇರಿ ಮುಂಭಾಗ ಗದಿಂದ ದಾರಿ ವ್ಯವಸ್ಥೆ, ಪೆರುವಾಜೆ ಗ್ರಾಮದ ಮುರ್ಕೆತ್ತಿಗೆ ಟ್ರಾನ್ಸ್ ಫಾರ್ಮರ್ ಹಾಗೂ ಹಳೆಯ ವಿದ್ಯುತ್ ತಂತಿ ಬದಲಾವಣೆ, ಸಬ್ ರಿಜಿಸ್ಟ್ರಾರ್ ಕಚೇರಿಯ ಆನ್ ಲೈನ್ ಸೇವೆ ಸುಗಮವಾಗಿ ನಡೆಯುವಂತೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರಿಗೆ ಮನವಿ ಸಲ್ಲಿಸಿದ್ದಾರೆ.


ಅರ್ಜಿ ಸಲ್ಲಿಸಲು ಆಯಾಯ ಇಲಾಖೆಗಳಿಗೆ ಪ್ರತ್ಯೇಕ ಕೌಂಟರ್ ತೆರೆದಿದ್ದು ಅವರು ಅರ್ಜಿ ಪಡೆದು ಅದಕ್ಕೆ ನಂಬರ್ ನೀಡಿ ನಂತರ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿ ಹಾಗೂ ಇಲಾಖೆಯ ಎಲ್ಲಾ ಅಧಿಕಾರಿಗಳು ಇದ್ದ ವೇದಿಕೆಗೆ ಬಂದು ಅರ್ಜಿದಾರರ ಸಮ್ಮುಖದಲ್ಲೇ ಪರಿಶೀಲನೆ ನಡೆಯುವ ಕಾರ್ಯ ಆಗಿದೆ.


ಕೊಡಿಯಾಲ ಗ್ರಾಮದ ರಾಮ ಬೈರ ಅವರಿಗೆ ಮಳೆ ಹಾನಿ ಯೋಜನೆ ಯಡಿಯಲ್ಲಿ ಮನೆ ನೀಡಲು ಮನವಿ ಮಾಡಿದಾಗ ಮನೆ ನೀಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದ್ದಾರೆ ಜೊತೆಗೆ ಅವರಿಗೆ ಬಾಡಿಗೆ ಮನೆ ವ್ಯವಸ್ಥೆ ಮಾಡಿದ್ದೇವೆ ಎಂದರು.
ಎಂದು ಸಚಿನ್ ರಾಜ್ ಶೆಟ್ಟಿ ತಿಳಿಸಿದ್ದಾರೆ.