ಮಂಗಳೂರಿನಲ್ಲಿ ನಡೆದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಸುಳ್ಯದ ರೈತ ಸಂಘದ ಪದಾಧಿಕಾರಿಗಳು ಭಾಗಿ

0


ಮಂಗಳೂರು ಪುರಭವನದಲ್ಲಿ ದ ಕ ಜಿಲ್ಲೆಯ ಜನತಾ ದರ್ಶನ ಕಾರ್ಯಕ್ರಮ ನಡೆಯಿತು.
ದ ಕ ಜಿಲ್ಲೆಯ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್‌ರವರು ಕಾರ್ಯಕ್ರಮ ನಡೆಸಿಕೊಟ್ಟರು. ಜಿಲ್ಲಾಧಿಕಾರಿ ಮಲ್ಲೈ ಮುಗಿಲನ್ ಹಾಜರಿದ್ದರು.
ರೈತರ ವಿವಿಧ ಸುಮಾರು ೨೦ಕ್ಕೂ ಹೆಚ್ಚು ಸಮಸ್ಯೆಗಳನ್ನು ಪಟ್ಟಿ ಮಾಡಿ ವಿವರಣೆಯೊಂದಿಗೆ ಮನವಿ ಸಲ್ಲಿಸಲಾಯಿತು. ಈ ಸಮಸ್ಯೆಗಳನ್ನು ಚರ್ಚಿಸಲು ರೈತರ ಪ್ರತ್ಯೇಕ ಸಭೆ ಕರೆಯಲು ಆದೇಶಿಸಿದರು.


ನಿಯೋಗದಲ್ಲಿ ತಾಲೂಕು ಅಧ್ಯಕ್ಷರಾದ ಲೋಲಜಾಕ್ಷ ಭೂತಕಲ್ಲು, ತೀರ್ಥರಾಮ ಉಳುವಾರು, ಮಾಧವ ಗೌಡ ಸುಳ್ಯಕೋಡಿ ಹಾಗೂ ಕಾರ್ಯದರ್ಶಿ ಭರತ್ ಕುಮಾರ್ ಕೆ ಮತ್ತು ಜಿಲ್ಲಾ ಘಟಕದ ಪದಾಧಿಕಾರಿಗಳು ಹಾಜರಿದ್ದರು.