ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಸುಳ್ಯ ತಾಲೂಕು ಘಟಕದ ಪದಗ್ರಹಣ ಕಾರ್ಯಕ್ರಮ

0


ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಸುಳ್ಯ ತಾಲೂಕು ಘಟಕ ಇದರ 2023 -24 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಇಂದು ಸುಳ್ಯದ ರಂಗಮಯೂರಿ ಕಲಾಶಾಲೆಯಲ್ಲಿ ನಡೆಯಿತು.

ಸಂಘದ ಗೌರವಾಧ್ಯಕ್ಷ ಶಿವಪ್ರಸಾದ್ ಆಲೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಪ್ರೆಸ್ ಕ್ಲಬ್ ಅಧ್ಯಕ್ಷ ಹರೀಶ್ ಬಂಟ್ವಾಳ್ ನೂತನ ಅಧ್ಯಕ್ಷರಾದ ಈಶ್ವರ ವಾರಣಾಶಿ ತಂಡಕ್ಕೆ ಪದಗ್ರಹಣ ನೆರವೇರಿಸಿದರು.

ಮುಖ್ಯ ಅತಿಥಿಗಳಾಗಿ ಸುದ್ದಿ ಚಾನೆಲ್ ಮುಖ್ಯಸ್ಥ ದುರ್ಗಾಕುಮಾರ್ ನಾಯರ್‌ಕೆರೆ ಉಪಸ್ಥಿತರಿದ್ದು,ನೂತನ ಪದಾಧಿಕಾರಿಗಳಿಗೆ ಶುಭ ಹಾರೈಸಿದರು. ಅಧ್ಯಕ್ಷ ಈಶ್ವರ ವಾರಣಾಶಿ ಮಾತನಾಡಿದರು.


ಸುಳ್ಯ ಮರಾಟಿ ಸಮಾಜ ಸೇವಾ ಸಂಘದ ಅಧ್ಯಕ್ಷ ಜನಾರ್ದನ ಬಿ.ಕುರುಂಜಿಭಾಗ್, ಮಹಿಳಾ ವೇದಿಕೆಯ ಅಧ್ಯಕ್ಷೆ ಶ್ರೀಮತಿ ಗಿರಿಜಾ, ಸಾಹಿತಿ ಎ‌.ಕೆ.ಹಿಮಕರ, ಅಡ್ಪಂಗಾಯ ಅಯ್ಯಪ್ಪ ಸ್ವಾಮಿ ಸೇವಾ ಟ್ರಸ್ಟ್ ನ ಧರ್ಮದರ್ಶಿ ಶಿವಪ್ರಕಾಶ್ ಅಡ್ಪಂಗಾಯ, ಬಾಳಿಲ ದೇವತಾರಾಧನ ಸಮಿತಿಯ ಸಂಚಾಲಕ ರಾಜೇಶ್ ಬಾಳಿಲ ಶುಭ ಹಾರೈಸಿದರು.


ವೇದಿಕೆಯಲ್ಲಿ ಕೆಜೆಯು ಜಿಲ್ಲಾ ಉಪಾಧ್ಯಕ್ಷ ಶರೀಫ್ ಜಟ್ಟಿಪಳ್ಳ, ಕಾರ್ಯದರ್ಶಿ ಜಯಶ್ರೀ ಕೊಯಿಂಗೋಡಿ, ಖಜಾಂಜಿ ವಿನಯ್ ಜಾಲ್ಸೂರು ಉಪಸ್ಥಿತರಿದ್ದರು.


ಕೆಜೆಯು ಉಪಾಧ್ಯಕ್ಷ ಯಶ್ವಿತ್ ಕಾಳಂಮನೆ ಸ್ವಾಗತಿಸಿ, ಕಾರ್ಯದರ್ಶಿ ಜಯಶ್ರೀ ಕೊಯಿಂಗೋಡಿ ವಂದಿಸಿದರು. ಜಿಲ್ಲಾ ಸಮಿತಿ ಸದಸ್ಯ ರಮೇಶ್ ನೀರಬಿದಿರೆ ಕಾರ್ಯಕ್ರಮ ನಿರೂಪಿಸಿದರು.