ಅ.3 ರಂದು ಸುಳ್ಯದಲ್ಲಿ ಡಾ.ವೀರೇಂದ್ರ ಹೆಗ್ಗಡೆಯವರ ಉಪಸ್ಥಿತಿ ಯಲ್ಲಿಗಾಂಧಿಸ್ಮೃತಿ,ಜನ ಜಾಗೃತಿ ಜಾಥಾ ಮತ್ತು ಸಮಾವೇಶ

0

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ ದ. ಕ. ಜಿಲ್ಲೆ 02,ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ ದ.ಕ ಜಿಲ್ಲೆ ಇದರ ವತಿಯಿಂದ ಅ.3 ರಂದು ಸುಳ್ಯದ ಅಮರಶ್ರೀಭಾಗ್ ಕುರುಂಜಿ ಜಾನಕಿ ವೆಂಕಟ್ರಮಣ ಗೌಡ ಸಭಾಭವನದಲ್ಲಿ ಗಾಂಧಿಸ್ಮೃತಿ ಹಾಗೂ ಜಾಥಾ ಜನಜಾಗೃತಿ ‌ಸಮಾವೇಶವು ನಡೆಯಲಿದ್ದು ಸುಳ್ಯದ ಪ್ರೆಸ್ ಕ್ಲಬ್ ನಲ್ಲಿ ಸೆ.30 ರಂದು ಪತ್ರಿಕಾಗೋಷ್ಠಿ ನಡೆಸಿದರು.

ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ .ವೀರೇಂದ್ರ ಹೆಗ್ಗಡೆಯವರು ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ಸುಳ್ಯ ವಿಧಸನಸಭಾ ಕ್ಷೇತ್ರದ ಶಾಸಕಿ ಕು| ಭಾಗೀರಥಿ ಮುರುಳ್ಯ ಕಾರ್ಯಕ್ರಮ ಉದ್ಘಾಟಿಸಲಿರುವರು. ಶ್ರೀ ಮಹಾಲಕ್ಷ್ಮಿ ಕ್ಷೇತ್ರ ಶ್ರೀಧಾಮ ಮಾಣಿಲದ ಮೋಹನದಾಸ ಪರಮಹಂಸ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ.

ಸುಳ್ಯ ಸೈಂಟ್ ಬ್ರಿಜಿಡ್ಸ್ ಚರ್ಚಿನ ಧರ್ಮಗುರು ರೆ. ಫಾ. ವಿಕ್ಟರ್ ಡಿಸೋಜ ಶುಭ ಸಂದೇಶ ನೀಡಲಿದ್ದಾರೆ.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ ಇದರ ಮುಖ್ಯ ಕಾರ್ಯನಿರ್ವಹಣಾಧಿಕಾರಿಡಾಎಲ್.ಹೆಚ್.ಮಂಜುನಾಥ್ ಆಶಯ ಭಾಷಣ ಮಾಡಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಶಂಕರಪ್ಪ ಕಾರ್ಯದರ್ಶಿಗಳು ಕರ್ನಾಟಕ ರಾಜ್ಯ ಮಧ್ಯಪಾನ ಸಂಯಮ ಮಂಡಳಿ, ಬೆಂಗಳೂರು ಡಾ. ಕೆ.ವಿ ರೇಣುಕಾ ಪ್ರಸಾದ್ ನಿರ್ದೇಶಕರು, ರಾಜ್ಯ ಒಕ್ಕಲಿಗರ ಸಂಘ ಬೆಂಗಳೂರು, ಪ್ರೊಫೆಸರ್ ಯೂಸುಫ್ ಪೈಚಾರು ನಿವೃತ್ತ ಪ್ರಾಂಶುಪಾಲರು, ನೆಹರು ಆರ್ಟ್ಸ್ ಸೈನ್ಸ್ ಕಾಮರ್ಸ್ ಕಾಲೇಜು ಹುಬ್ಬಳ್ಳಿ,ಆರ್ ಬಿ ಹೆಬ್ಬಳ್ಳಿ, ಉದ್ಯಮಿಗಳು ಮುಂಬೈ, ಎಂ. ಹೆಚ್ ಸುಧಾಕರ ಮುಖ್ಯಾಧಿಕಾರಿ ನಗರ ಪಂಚಾಯತ್ ಸುಳ್ಯ ಭಾಗವಹಿಸಲಿದ್ದಾರೆ.
ಜಿಲ್ಲಾ ಜನಜಾಗೃತಿ ವೇದಿಕೆಯ‌ ಅಧ್ಯಕ್ಷ ಎನ್.ಎ.ರಾಮಚಂದ್ರ, ಸುಳ್ಯ ತಾಲೂಕು ಜನಜಾಗೃತಿ ವೇದಿಕೆ ಅಧ್ಯಕ್ಷ ಲೋಕನಾಥ್ ಅಮೆಚೂರು, ಉಡುಪಿ ಕರಾವಳಿ ಪ್ರಾದೇಶಿಕ ನಿರ್ದೇಶಕ ದುಗ್ಗೇ ಗೌಡ, ಬೆಳ್ತಂಗಡಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಪ್ರಾದೇಶಿಕ ನಿರ್ದೇಶಕ ವಿವೇಕ್ ವಿ.ಪಾಯಸ್, ಸುಳ್ಯ
ಕೇಂದ್ರ ಒಕ್ಕೂಟದ ಅಧ್ಯಕ್ಷ ಸುರೇಶ್ ಕಣೆಮರಡ್ಕ ಉಪಸ್ಥಿತಿರಿರುವರು ಎಂದು ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷ ಪದ್ಮನಾಭ ಶೆಟ್ಟಿ ಯವರು ವಿವರ ನೀಡಿದರು.

ಧರ್ಮಾಧಿಕಾರಿಯವರ ಕಲ್ಪನೆಯಲ್ಲಿ ದುಶ್ಚಟ ಮುಕ್ತ ಸಮಾಜದ ನಿರ್ಮಾಣಕ್ಕೆ ಪಣತೊಟ್ಟು ಗಾಂಧೀಜಿಯವರ ಕನಸ್ಸಿಗೆ ಪೂರಕವಾಗಿ ವ್ಯಸನ ಮುಕ್ತ ಸಮಾಜದ ಜಾಗೃತಿ ಗಾಗಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಮುಖಾಂತರ ಮದ್ಯವರ್ಜನ ಶಿಬಿರಗಳನ್ನು ನಡೆಸಿ ಸುಮಾರು 1.5 ಲಕ್ಷ ವ್ಯಸನಿಗಳ ಮನಪರಿವರ್ತನೆ ಮಾಡಲಾಗಿದೆ. 1723 ಮದ್ಯವರ್ಜನ ಶಿಬಿರ ನಡೆಸಲಾಗಿದೆ. ರಾಜ್ಯಾದ್ಯಂತ 108 ಕಾರ್ಯಕ್ರಮ ಆಯೋಜನೆಗೆ ಪೂರ್ವ ತಯಾರಿ ಮಾಡಲಾಗಿದೆ. ಜಿಲ್ಲೆಯ 6 ತಾಲೂಕಿನ ಸದಸ್ಯರು ಪಾಲ್ಗೊಂಡು ಅಭೂತಪೂರ್ವ ಕಾರ್ಯಕ್ರಮ ಜನಜಾಗೃತಿ ವೇದಿಕೆಯ ಮೂಲಕ ಯಶಸ್ವಿ ನಿರ್ವಹಣೆ ಮಾಡಲಾಗುವುದು.
ಸಮಾವೇಶದ ಜಾಥಾವು ಬೆಳಗ್ಗೆ ಗಂಟೆ 9.30 ರಿಂದ ಸುಳ್ಯದ ಜ್ಯೋತಿ ವೃತ್ತದಿಂದ ಪ್ರಾರಂಭಗೊಂಡು ಪ್ರಧಾನ ರಸ್ತೆಯ ಮೂಲಕ ಸಭಾಭವನದ ತನಕ ಸಾಗಿ ಬರಲಿದೆ. ಜಾಥಾದಲ್ಲಿ ತಾಲೂಕಿನ ಭಜನಾ ತಂಡಗಳು, ನವಜೀವನ ಸಮಿತಿಯ ಸದಸ್ಯರು ಹಾಗೂ ಜಿಲ್ಲೆಯ ಎಲ್ಲಾ ತಾಲೂಕಿನ ಜನಜಾಗೃತಿ ಸಮಿತಿಯ ಸದಸ್ಯರು ಹಾಗೂ ಯೋಜನೆಯ ಸಂಘದ ಸದಸ್ಯರು ಒಟ್ಟು ಸೇರಿ ಸುಮಾರು 5-7 ಸಾವಿರ ಮಂದಿಭಾಗವಹಿಸಲಿರುವುದಾಗಿ ದ.ಕ ಜಿಲ್ಲೆ 02 ನಿರ್ದೇಶಕ ಪ್ರವೀಣ್ ಕುಮಾರ್ ತಿಳಿಸಿದರು.

ವ್ಯಸನ ಮುಕ್ತ ರನ್ನು ಗುರುತಿಸಿ ಜಾಗೃತಿ ಅಣ್ಣ, ಜಾಗೃತಿ ಮಿತ್ರ ಪ್ರಶಸ್ತಿ ಪ್ರಧಾನ ಮಾಡಲಾಗುವುದು. ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂ ಸೇವಕ ಆಪದ್ಭಾಂದವರಿಗೆ ಶೌರ್ಯ ಶ್ರೇಷ್ಠ ಸಾಧಕ ಪ್ರಶಸ್ತಿ ನೀಡಲಾಗುವುದು. ನವಜೀವನ ಸಾಧಕ ಪ್ರಶಸ್ತಿಯನ್ನು ವಿತರಣೆಯನ್ನು ಧರ್ಮಾಧಿಕಾರಿಯವರು ನೆರವೇರಿಸಲಿದ್ದಾರೆ. ಸಮಿತಿಯ ಸದಸ್ಯರ ಸೂಚನೆ ಮೇರೆಗೆ ಅಕ್ರಮ ಮದ್ಯ ಮಾರಾಟ ತಡೆಯುವಿಕೆಗೆ ಜನಜಾಗೃತಿ ವೇದಿಕೆಯ ಮೂಲಕ ಗ್ರಾಮ ಮಟ್ಟದಲ್ಲಿ ಜಾಗೃತಿ ನಡೆಸಲಾಗುತ್ತಿದೆ
ಎಂದು ತಾಲೂಕು ಜನಜಾಗೃತಿ ವೇದಿಕೆಯ ಅಧ್ಯಕ್ಷ ಲೋಕನಾಥ್ ಅಮೆಚೂರ್ ವಿವರ ನೀಡಿದರು.

ತಾಲೂಕು ಜನಜಾಗೃತಿ ವೇದಿಕೆಯ ಮೂಲಕ ಅಡಿಕೆ ಬೆಳೆಗಾರರ ಹಳದಿ ರೋಗ ಸಮಸ್ಯೆಗೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ರಾಜ್ಯ ಸಭೆ ಸದಸ್ಯರಾಗಿರುವ ಡಾ.ವೀರೇಂದ್ರ ಹೆಗ್ಗಡೆಯವರಿಗೆ ಸಮಾವೇಶದಲ್ಲಿ ವೇದಿಕೆಯ ಮೂಲಕ ಮನವಿ ನೀಡಲಾಗುವುದು ಎಂದು ವೇದಿಕೆಯ ಮಾಜಿ ಅಧ್ಯಕ್ಷ ಎನ್.ಎ.ರಾಮಚಂದ್ರ ರವರು ತಿಳಿಸಿದರು.
ಕಾರ್ಯಕ್ರಮದ ಪೂರ್ವ ಸಿದ್ಧತೆಯು ಯೋಜನೆಯ ಮೂಲಕ ನಿರ್ವಹಿಸಲಾಗುತ್ತಿದೆ. ವಲಯದ ಮೇಲ್ವಿಚಾರಕ ರು ಮತ್ತು ಸೇವಾ ಪ್ರತಿನಿಧಿಗಳಿಗೆ ಜವಬ್ದಾರಿ ಹಂಚಿಕೆ ಮಾಡಲಾಗಿದೆ. ಉಪ ಸಮಿತಿಗಳನ್ನು ರಚಿಸಲಾಗಿದ್ದು ವಲಯ ಮಟ್ಟದಲ್ಲಿ ಜವಬ್ದಾರಿ ವಹಿಸಲಾಗಿದೆ ಎಂದು ಯೋಜನಾಧಿಕಾರಿ ನಾಗೇಶ್ ಪಿ ತಿಳಿಸಿದರು.

ಪತ್ರಿಕಾ ಗೋಷ್ಠಿಯಲ್ಲಿ ತಾಲೂಕು ಒಕ್ಕೂಟದ ಅಧ್ಯಕ್ಷ ಸುರೇಶ್ ಕಣೆಮರಡ್ಕ, ಜನಜಾಗೃತಿ ವೇದಿಕೆಯ ಸದಸ್ಯ ಪದ್ಮನಾಭ ಜೈನ್ , ಬೂಡು ರಾಧಾಕೃಷ್ಣ ರೈ ಉಪಸ್ಥಿತರಿದ್ದರು.