ಪಾಟಾಳಿ ಯಾನೆ ಗಾಣಿಗ ಸೇವಾ ಸಂಘದ ವಾರ್ಷಿಕ ಮಹಾಸಭೆ

0

ಪಾಟಾಳಿ ಯಾನೆ ಗಾಣಿಗ ಸಮಾಜ ಸೇವಾ ಸಂಘದ ವಾರ್ಷಿಕ ಮಹಾಸಭೆಯು ಇಂದು ಕೇರ್ಪಳ ದುರ್ಗಾಪರಮೇಶ್ವರಿ ಸಭಾಭಾವನದಲ್ಲಿ ನಡೆಯಿತು.
ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಚಂದ್ರಶೇಖರ ಉದ್ದಂತಡ್ಕ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಸುಳ್ಯ ನಿವೃತ್ತ ಕ್ಷೇತ್ರ ಶಿಕ್ಷಣಾಧಿಕಾರಿ ಶಂಕರ ಪಾಟಾಳಿ ಪರಿವಾರಕಾನ, ಪುತ್ತೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಅಪ್ಪು ಮಾಸ್ತರ್ ಜಯನಗರ, ಮಂಗಳೂರು ನಿವೃತ್ತ ಉಪ ತಹಶೀಲ್ದಾರ್ ಮಹಾಲಿಂಗ ದೇರೆಬೈಲು, ಸಂಘದ ಆಂತರಿಕ ಲೆಕ್ಕ ಪರಿಶೋಧಕರಾದ ಮಹಾಲಿಂಗನ್ ಬಾಜರ್ತೋಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.


ಈ ಸಂದರ್ಭದಲ್ಲಿ ಆರೋಗ್ಯನಿಧಿ ವಿತರಣೆ ಹಾಗೂ ಎಸ್. ಎಸ್. ಎಲ್. ಸಿ. ಹಾಗೂ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನಡೆಯಿತು.
ಉದಯರವಿ ಕಲ್ಚಾರ್ ಸ್ವಾಗತಿಸಿದರು. ರಾಧಾಕೃಷ್ಣ ಬೇರ್ಪಡ್ಕ ವಂದಿಸಿದರು. ಪ್ರವೀಣ್ ಜಯನಗರ ಮತ್ತು ಸಾವಿತ್ರಿ ಜಯನಗರ ಕಾರ್ಯಕ್ರಮ ನಿರೂಪಿಸಿದರು