ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ಗಾಂಧಿ ಜಯಂತಿ ಪ್ರಯುಕ್ತ ಸ್ವಚ್ಛತಾ ಅಭಿಯಾನ

0

ಗಾಂಧಿ ಜಯಂತಿ ಪ್ರಯುಕ್ತ ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಮತ್ತು ಗ್ರಾಮ ಪಂಚಾಯತ್ ಪೆರಾಜೆ ಇವುಗಳ ಸಹಯೋಗದೊಂದಿಗೆ ಸ್ವಚ್ಛತಾ ಅಭಿಯಾನ ಅ.01 ರಂದು ನಡೆಯಿತು. ಕಾರ್ಯಕ್ರಮದಲ್ಲಿ ಸಹಕಾರ ಸಂಘದ ಅಧ್ಯಕ್ಷರಾದ ನಾಗೇಶ್ ಕುಂದಲ್ಪಾಡಿ, ಉಪಾಧ್ಯಕ್ಷರಾದ ಅಶೋಕ ಪಿ.ಎಂ., ಗ್ರಾಮ ಪಂಚಾಯತ್ ಪಿಡಿಒ ಮಹದೇವ ಪ್ರಭು, ಗ್ರಾ. ಪಂ. ಉಪಾಧ್ಯಕ್ಷ ನಂಜಪ್ಪ ನಿಡ್ಯಮಲೆ, ಸಹಕಾರ ಸಂಘದ ನಿರ್ದೇಶಕರುಗಳಾದ ಹೊನ್ನಪ್ಪ ಅಮಚೂರು, ಜಯರಾಮ ನಿಡ್ಯಮಲೆ, ಸೀತಾರಾಮ ಕದಿಕಡ್ಕ, ಧನಂಜಯ ಕೋಡಿ ವಿ, ಪ್ರಮೀಳಾ ಬಂಗಾರಕೋಡಿ, ಪುಷ್ಪಾವತಿ ಯಾಪಾರೆ, ಧೀನರಾಜ್ ಡಿ ಸಿ, ಶೇಷಪ್ಪ ಎನ್ ವಿ, ಜಯರಾಮ ಪಿ ಟಿ, ಕಿರಣ ಬಂಗಾರಕೋಡಿ, ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮತ್ತು ಸಿಬ್ಬಂದಿ ವರ್ಗ, ಗ್ರಾಮ ಪಂಚಾಯತಿ ಸಿಬ್ಬಂದಿ ವರ್ಗದವರು, ಸ್ವಚ್ಛತಾ ವಾಹನ ಚಾಲಕರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಸಂಘದ ಆವರಣದಿಂದ ಗಡಿಗುಡ್ಡೆ ತನಕ ಸ್ವಚ್ಛತೆ ನಡೆಸಲಾಯಿತು.