ಶಾಂತಿನಗರ ಸ ಉ ಹಿ ಪ್ರಾ ಶಾಲೆ ಯಲ್ಲಿ ಗಾಂಧಿ ಜಯಂತಿ ಮತ್ತು ಸ್ವಚ್ಛತಾ ಅಭಿಯಾನ

0

ಶಾಂತಿನಗರ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇಂದು ಗಾಂಧಿ ಜಯಂತಿ‌ ಆಚರಿಸಲಾಯಿತು.ಗಾಂಧಿ ಜಯಂತಿ ಪ್ರಯುಕ್ತ ಸ್ವಚ್ಛತಾ ಅಭಿಯಾನ ಮತ್ತು ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಶಾಲಾ ಪರಿಸರದಿಂದ ರಾಷ್ಟ್ರೀಯ ಹೆದ್ದಾರಿ ವರೆಗೆ ರಸ್ತೆಯ ಬದಿಯಲ್ಲಿರುವ ಕಸ ಕಡ್ಡಿಗಳನ್ನು ಹೆಕ್ಕಿ ಸ್ವಚ್ಛಗೊಳಿಸಲಾಯಿತು. ವಿದ್ಯಾರ್ಥಿಗಳಿಗೆ ರಸ ಪ್ರಶ್ನೆ ಸ್ಪರ್ಧೆ ಆಯೋಜಿಸಲಾಯಿತು.ಸ್ಪರ್ಧಾ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣಾ ಕಾರ್ಯಕ್ರಮ ನಡೆಯಿತು.

ಈ ಸಂಧರ್ಭದಲ್ಲಿ ಎಸ್.ಡಿ.ಎಂ.ಸಿ ಅಧ್ಯಕ್ಷ ನಝೀರ್ ಶಾಂತಿನಗರ, ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ತುಳಸಿ, ಹಾಗೂ ಎಸ್ ಡಿ ಎಂ ಸಿ ಸದಸ್ಯರು, ಸ್ಥಳೀಯ ಸಂಘ ಸಂಸ್ಥೆಗಳ ಸದಸ್ಯರು, ಶಿಕ್ಷಕ ವೃಂದದವರು, ಅಂಗನವಾಡಿ ಶಿಕ್ಷಕಿ ಮತ್ತು ಸಹಾಯಕಿಯರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.