ಪೆರಾಜೆ ಗ್ರಾ.ಪಂ.ನಲ್ಲಿ ಗಾಂಧಿಜಯಂತಿ ಆಚರಣೆ

0

ವರ್ಗಾವಣೆಗೊಂಡ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಮಹದೇವ ಪ್ರಭು ಅವರಿಗೆ ಬೀಳ್ಕೊಡುಗೆ

ಪೆರಾಜೆ ಗ್ರಾಮ ಪಂಚಾಯತಿಯಲ್ಲಿ
ಗಾಂಧಿಜಯಂತಿ ಆಚರಣೆ ಮತ್ತು ವರ್ಗಾವಣೆಗೊಂಡ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಮಹದೇವ ಪ್ರಭು ಅವರಿಗೆ ಬೀಳ್ಕೊಡುಗೆ ಕಾರ್ಯಕ್ರಮವು ಅ.2ರಂದು ಗ್ರಾಮ ಪಂಚಾಯತಿ ಸಭಾಭವನದಲ್ಲಿ ನಡೆಯಿತು.

ಕಳೆದ ಐದೂವರೆ ವರ್ಷಗಳಿಂದ ಪೆರಾಜೆ ಗ್ರಾಮ ಪಂಚಾಯತಿಯಲ್ಲಿ ಅಭಿವೃದ್ಧಿ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಮಹದೇವ ಪ್ರಭು ಕೆ. ವಿ ಅವರು ಪ್ರಸ್ತುತ ತಮ್ಮ ತವರು ಜಿಲ್ಲೆಯಾದ ಚಾಮರಾಜನಗರಕ್ಕೆ ವರ್ಗಾವಣೆಗೊಂಡಿದ್ದು, ಅವರಿಗೆ ಬೀಳ್ಕೊಡುಗೆ ಕಾರ್ಯಕ್ರಮ ಜರುಗಿತು.

ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಚಂದ್ರಕಲಾ, ಉಪಾಧ್ಯಕ್ಷ ನಂಜಪ್ಪ ನಿಡ್ಯಮಲೆ, ಗ್ರಾ.ಪಂ. ಸದಸ್ಯರುಗಳು, ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ನಾಗೇಶ್ ಕುಂದಲ್ಪಾಡಿ, ಶಿಕ್ಷಣ ಇಲಾಖೆಯ ಸಿ. ಆರ್. ಪಿ. ರೇಖಾ, ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲೋಕೇಶ್ ಹೊದ್ದೆಟ್ಟಿ , ಪಂಚಾಯತಿ ಸಿಬ್ಬಂದಿ ವರ್ಗದವರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು. ಗಾಂಧಿಜಯಂತಿ ಆಚರಣೆ ಅಂಗವಾಗಿ ಸ್ವಚ್ಛತಾ ಕಾರ್ಯ ಜರುಗಿತು.