ಜ್ಞಾನದೀಪ ವಿದ್ಯಾಸಂಸ್ಥೆ ಎಲಿಮಲೆಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮದಿನಾಚರಣೆ

0

ಜ್ಞಾನದೀಪ ವಿದ್ಯಾ ಸಂಸ್ಥೆ ಎಲಿಮಲೆಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹುದ್ದೂರ್ ಶಾಸ್ತ್ರಿ ಜನ್ಮ ದಿನಾಚರಣೆಯನ್ನು ಅ.2ರಂದು ಆಚರಿಸಲಾಯಿತು. ವಿದ್ಯಾಸಂಸ್ಥೆಯ ಸಹಶಿಕ್ಷಕಿ ಶ್ರೀಮತಿ ಹೇಮಲತಾ ರವರು ಕಾರ್ಯಕ್ರಮವನ್ನು ದೀಪ ಬೆಳಗುವುದರ ಮೂಲಕ ಉದ್ಘಾಟಿಸಿದರು. ವಿದ್ಯಾಸಂಸ್ಥೆಯ ಆಡಳಿತ ಮಂಡಳಿಯ ಅಧ್ಯಕ್ಷರಾದ ಚಂದ್ರಶೇಖರ ಭಟ್ ತಳೂರು ಗಾಂಧೀಜಿಯವರ ಬಗ್ಗೆ ಹಿತವಚನಗಳನ್ನು ನುಡಿದರು. ಈ ಕಾರ್ಯಕ್ರಮದಲ್ಲಿ ವೇದಿಕೆಯಲ್ಲಿ ಆಡಳಿತ ಮಂಡಳಿಯ ನಿರ್ದೇಶಕರಾದ ರಾಧಾಕೃಷ್ಣ ಮಾವಿನಕಟ್ಟೆ, ಶಾಲಾ ಮುಖ್ಯೋಪಾಧ್ಯರಾದ ಗದಾಧರ ಬಾಳುಗೋಡು, ಶಿಕ್ಷಕ ರಕ್ಷಕ ಸಂಘದ ಕಾರ್ಯದರ್ಶಿ ಭಾರತಿ ಕೇಪಳಕಜೆ ಉಪಸ್ಥಿತರಿದ್ದು ಗಾಂಧಿ ಜಯಂತಿಯ ಮಹತ್ವದ ಬಗ್ಗೆ ತಿಳಿಸಿದರು . ಸಭಾ ಕಾರ್ಯಕ್ರಮದ ಬಳಿಕ ಶಿಕ್ಷಕ ವೃಂದದವರು ಹಾಗೂ ವಿದ್ಯಾರ್ಥಿಗಳು ಶಾಲಾ ಆವರಣವನ್ನು ಸ್ವಚ್ಛಗೊಳಿಸಿದರು.
ಈ ಕಾರ್ಯಕ್ರಮವನ್ನು ಶಾಲಾ ಶಿಕ್ಷಕಿಯಾದ ಶ್ರೀಮತಿ ರೇಖಾ ಮಾತಾಜಿಯವರು ನಿರೂಪಿಸಿ, ಧನ್ಯವಾದಗೈದರು.