ಮಡಪ್ಪಾಡಿ : ಗಾಂಧಿ ಜಯಂತಿಯ ಪ್ರಯುಕ್ತ ಸ್ವಚ್ಛತಾ ಕಾರ್ಯಕ್ರಮ

0

ಯುವಕ ಮಂಡಲ ಮಡಪ್ಪಾಡಿ, ಯುವಜನ ಸಂಯುಕ್ತ ಮಂಡಳಿಸುಳ್ಯ ಹಾಗೂ ಗ್ರಾಮ ಪಂಚಾಯತ್ ಮಡಪ್ಪಾಡಿ ಇವುಗಳ ಆಶ್ರಯದಲ್ಲಿ ಗಾಂಧಿ ಜಯಂತಿಯ ಪ್ರಯುಕ್ತ ಸ್ವಚ್ಛತಾ ಕಾರ್ಯಕ್ರಮ ಅ.2ರಂದು ಮಡಪ್ಪಾಡಿಯಲ್ಲಿ ನಡೆಯಿತು.


ಮಡಪ್ಪಾಡಿ ಪೇಟೆ, ಯುವಕ ಮಂಡಲ ಹಾಗೂ ಮಡಪ್ಪಾಡಿ ಸೊಸೈಟಿಯ ಹತ್ತಿರ ಸ್ವಚ್ಛಗೊಳಿಸಲಾಯಿತು.
ಈ ಸ್ವಚ್ಛತಾ ಕಾರ್ಯಕ್ರಮದಲ್ಲಿ ಮಡಪ್ಪಾಡಿ ಯುವಕ ಮಂಡಲದ ಕಾರ್ಯದರ್ಶಿ ವಿನ್ಯಾಸ್ ಪಾರೆಮಜಲು, ಯುವಜನ ಸಂಯುಕ್ತ ಮಂಡಳಿ ಸುಳ್ಯ ಇದರ ನಿರ್ದೇಶಕರಾದ ಲೋಹಿತ್ ಬಾಳಿಕಳ, ಎಪಿಯಂಸಿ ಸುಳ್ಯ ಇದರ ಮಾಜಿ ಅಧ್ಯಕ್ಷರಾದ ವಿನಯ ಕುಮಾರ್ ಮುಳುಗಾಡು ಹಾಗೂ ಎಲ್ಲಾ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಸದಸ್ಯರು ಹಾಗೂ ಗ್ರಾಮಸ್ಥರು ಹಾಜರಿದ್ದು, ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.