ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಿಂದ ವಿವಿಧ ಶಾಲೆಗಳಿಗೆ ಟ್ರೀ ಗಾರ್ಡ್ ಹಸ್ತಾಂತರ

0

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವತಿಯಿಂದ ಕೆಲ ಶಾಲೆಗಳಿಗೆ ಅ‌.2 ರಂದು ಟೀ ಗಾರ್ಡ್ ಗಳನ್ನು ಹಸ್ತಾಂತರ ಮಾಡಲಾಯಿತು.

ಬಿಳಿನೆಲೆ ಕೈಕಂಬ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ, ಮರ್ದಾಳ ಹಿರಿಯ ಪ್ರಾಥಮಿಕ ಶಾಲೆ, ಕಲ್ಮಕಾರು ಹಿರಿಯ ಪ್ರಾಥಮಿಕ ಶಾಲೆಗಳ ಮುಖ್ಯಸ್ಥರು ಬಂದು ಟ್ರೀ ಗಾರ್ಡುಗಳನ್ನು ಪಡೆದುಕೊಂಡಿರುವರು. ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಟ್ರೀ ಗಾರ್ಡ್ ಗಳನ್ನು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮೋಹನ್ ರಾಮ್ ಸುಳ್ಳಿ, ಸದಸ್ಯರುಗಳಾದ ಎ.ಬಿ ಮನೋಹರ ರೈ, ಲೋಕೇಶ್ ಮುಂಡೋಕಜೆ ,ಪ್ರಸನ್ನ ದರ್ಬೆ, ಶೋಭಾ ಗಿರಿಧರ್ ,ಚಂದ್ರಶೇಖರ ಮರ್ದಾಳ ಉಪಸ್ಥಿತರಿದ್ದರು.